ದಾವಣಗೆರೆ: ಅಂಧ ಮಕ್ಕಳ ಸಂಗೀತ ಶಾಲೆಗೆ ಪ್ರವೇಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನಗರದ ಹೊರ ವಲಯದಲ್ಲಿರುವ ವೀರೇಶ್ವರ ಪುಣ್ಯಾಶ್ರಮದಲ್ಲಿ ಗುರು ಪಂಡಿತ್ ಪಂಚಾಕ್ಷರ ಗವಾಯಿ ಅಂಧರ ಶಿಕ್ಷಣ ಸಮಿತಿ ವತಿಯಿಂದ ಅಂಧ ಮಕ್ಕಳ ಸಂಗೀತ ಶಾಲೆಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪದ್ಮಭೂಷಣ ಡಾ.ಪಂಚಾಕ್ಷರಿ ಪುಟ್ಟರಾಜ ಗವಾಯಿಗಳವರಿಂದ ಸ್ಥಾಪಿತವಾದ ಸಂಗೀತ ಮಹಾವಿದ್ಯಾಲಯದಲ್ಲಿ ಕಳೆದ ಸುಮಾರು 25 ವರ್ಷಗಳಿಂದ ನೂರಾರು ಅಂಧ, ಅನಾಥ ಮಕ್ಕಳು, ದೀನ ದಲಿತ ಮಕ್ಕಳು ಹಾಗೂ ಅಂಗವಿಕಲ ಮಕ್ಕಳಿಗಳಿಗೆ ಉಚಿತ ವಸತಿಯುತ ಸಂಗೀತದ ಜೊತೆಗೆ ಬ್ರೈಲ್ ಶಿಕ್ಷಣವನ್ನು ನೀಡಲಾಗುತ್ತದೆ. ಹೊಸ ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಡಾ.ಅಥಣಿ ವೀರಣ್ಣ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಎ.ಎಚ್.ಸಿದ್ದಲಿಂಗ ಸ್ವಾಮಿ, ಕಾರ್ಯದರ್ಶಿಗಳು: 9449266133, ಆನಂದ್ ಪಾಟೀಲ್, ಸಂಗೀತ ಶಿಕ್ಷಕರು :9535715501, ಸುರೇಶ್ ಕೊಪ್ಪಳ, ತಬಲವಾದ ಶಿಕ್ಷಕರು: 9731878914 ಇವರನ್ನು ಸಂಪರ್ಕಿಸಲು ಅಧ್ಯಕ್ಷ ಡಾ.ಅಥಣಿ ವೀರಣ್ಣ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *