ದಾವಣಗೆರೆ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಜುಲೈ 22 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಜುಲೈ 22 ರಂದು ಬೆಳಿಗ್ಗೆ 11 ಗಂಟೆಗೆ ದಾವಣಗೆರೆಗೆ ಆಗಮಿಸಿ ಪಿ.ಬಿ.ರಸ್ತೆಯಲ್ಲಿರುವ ಶ್ರೀಮದ್ ಅಭಿನಯ ರೇಣುಕಾ ಮಂದಿರದಲ್ಲಿ ವೀರಶೈವ ಪೀಠಾಚಾರ್ಯ ಮತ್ತು ಶಿವಾಚಾರ್ಯರ ಸಮಿತಿ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 1.30ಕ್ಕೆ ಬೆಂಗಳೂರಿಗೆ ತೆರಳುವರೆಂದು ಪ್ರಕಟಣೆ ತಿಳಿಸಿದೆ.



