ದಾವಣಗೆರೆ: ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ಹಾಗೂ ನಿಯಮಗಳನುಸಾರ ಕಾರ್ಯನಿರ್ವಹಿಸದ ಕಾರಣ ದಾವಣಗೆರೆ ಜಿಲ್ಲೆಯಲ್ಲಿನ ಈ 16 ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಹಕಾರ ಇಲಾಖೆ ತಿಳಿಸಿದೆ.
ಯಾವ ಸಂಘಗಳ ಮಾನ್ಯತೆ ರದ್ದು..?
ಮಲ್ಲಿಕಾರ್ಜುನ ಪ.ಜಾ, ಪ.ಪಂ ಕೈಗಾರಿಕಾ ಸಹಕಾರ ಸಂಘ, ದಾವಣಗೆರೆ ತಾಲ್ಲೂಕು ಪ್ರಿಂರ್ಸ್ ಸಹಕಾರ ಸಂಘ, ಕಿಸಾನ್ ಕೃಷಿ ಮತ್ತು ಗ್ರಾಮೀಣ ಅಭೀವೃದ್ಧಿ ಸಹಕಾರ ಸಂಘ, ದಾವಣಗೆರೆ ತಾಲ್ಲೂಕು ಎಸ್.ಎಫ್.ಎಮ್.ಎಫ್.ಎಲ್.ಐ.ಸಿ ಸಹಕಾರ ಸಂಘ, ದಾವಣಗೆರೆ ನಗರ ಗ್ರಾಮಾಂತರ ತೋಟದ ಅಣಬೆ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ, ಬಣಜಾರ ವಿವಿದೋದ್ದೇಶ ಮತ್ತು ಅಭಿವೃದ್ಧಿ ಸಹಕಾರ ಸಂಘ, ದಿ ದಾವಣಗೆರೆ ಮೈನಾರಿಟಿಸ್ ಕೋ-ಆಪರೇಟಿವ್ ಸೊಸೈಟಿ, ಶಿರಮಗೊಂಡನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ, ಕುಂಟಪಾಲನಹಳ್ಳಿ ಹಾಲು ಉತ್ಪಾದಕರ ಸಂಘ, ಶ್ರೀ ಸ್ವಾಮಿ ವಿವೇಕಾನಂದ ಎಸ್.ಸಿ, ಎಸ್.ಟಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಅಪ್ರೈಸ್ ಕೋ-ಆಪರೇಟಿವ್ ಸೊಸೈಟಿ, ದೊಡ್ಡಬಾತಿಯ ಭದ್ರಾ ಸಹಕಾರಿ ಸಕ್ಕರೆ ಕಾರ್ಖಾನೆ ನೌಕರರ ಸಹಕಾರ ಸಂಘ, ದಾವಣಗೆರೆ ಪ.ಜಾತಿ, ಪ.ಪಂ ಗ್ರಾಮೀಣಾಭಿವೃದ್ಧಿ ಸಹಕಾರ ಸಂಘ, ಸಾಲೇಶ್ವರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ತುರ್ಚಘಟ್ಟದ ಶಿವ ವಿವಿದೋದ್ದೇಶ ಸಹಕಾರ ಸಂಘ ಮತ್ತು ಶ್ರೀ ಬಸವೇಶ್ವರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸೇರಿ ಒಟ್ಟು 16 ಸಹಕಾರ ಸಂಘಗಳನ್ನು ಸಮಾಪನೆಗೊಳಿಸಲಾಗಿದೆ.
ಸಹಕಾರ ಸಂಘಗಳಿಗೆ ಸಂಬಂಧಪಟ್ಟವರು ಪ್ರಕಟಣೆಗೊಂಡ 07 ದಿನಗಳೊಳಗೆ ವಿದ್ಯಾನಗರದ ಆಂಜನೇಯ ದೇವಸ್ಥಾನ ಎದುರಲ್ಲಿರುವ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಸಹಕಾರ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಲು ತಿಳಿಸಿದೆ. ಇಲ್ಲವಾದಲ್ಲಿ ನೇರವಾಗಿ ಸಹಕಾರ ಸಂಘಗಳ ನೋಂದಣಿ ರದ್ದತಿ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.



