Connect with us

Dvgsuddi Kannada | online news portal | Kannada news online

ದಾವಣಗೆರೆ: ತುಂಗಭದ್ರಾ ನದಿ ಪಾತ್ರದಲ್ಲಿ ನಿಷೇಧಾಜ್ಞೆ

tungabhadra river dvg

ದಾವಣಗೆರೆ

ದಾವಣಗೆರೆ: ತುಂಗಭದ್ರಾ ನದಿ ಪಾತ್ರದಲ್ಲಿ ನಿಷೇಧಾಜ್ಞೆ

ಹರಿಹರ: ಭದ್ರಾ ಜಲಾಶಯದಿಂದ ಹೆಚ್ಚಿನ ನೀರು ಬಿಡುಗಡೆ ಮಾಡಿರುವುದರಿಂದ ಜನರು ತುಂಗಭದ್ರಾ ನದಿಪಾತ್ರಕ್ಕೆ ತೆರಳದಂತೆ ತಾಲ್ಲೂಕು ಆಡಳಿತ ಎಚ್ಚರಿಸಿದ್ದು, ನದಿ ಪಾತ್ರದಲ್ಲಿ ನಿಷೇಧಾಜ್ಞೆ‌‌ ಜಾರಿ ಮಾಡಿದೆ.

ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳದಿಂದ ನದಿ ಪಾತ್ರದ ದಡದ ಜಮೀನುಗಳಿಗೆ ನೀರು ನುಗ್ಗಿದೆ. ‌ಹರಿಹರದ ಗಂಗಾನಗರ, ರಾಘವೇಂದ್ರ ಮಠ ಹಿಂಭಾಗದ ತುಂಗಭದ್ರಾರತಿ ಮಂಟಪದ ಮೆಟ್ಟಿಲುಗಳು ಜಲಾವೃತವಾಗಿವೆ.

ನಿಷೇಧಾಜ್ಞೆ ಜಾರಿ

ತಾಲ್ಲೂಕಿನ ಉಕ್ಕಡಗಾತ್ರಿ,‌ಗೋವಿನಹಾಳು, ಇಂಗಳಗೊಂದಿ,‌ ಎಳೆಹೊಳೆ, ಮಳಲಹಳ್ಳಿ, ನಂದಿಗುಡಿ, ಪಾಳ್ಯ, ನಂದಿಗಾವಿ, ಬಿಳಸನೂರು, ಹುಲಗಿನಹೊಳೆ, ರಾಜನಹಳ್ಳಿ, ಹಲಸಬಾಳು, ತಿಮ್ಮಾಪುರ, ಗುತ್ತೂರು,‌ದೀಟೂರು, ಪಾಮೇನಹಳ್ಳಿ, ಚಿಕ್ಕಬಿದರಿ ಗ್ರಾಮಗಳ ನದಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನದಿಯಲ್ಲಿ ಈಜಾಡುವುದು, ಬಟ್ಟೆ ಒಗೆಯುವುದು, ವಾಹನ, ದನಕರುಗಳನ್ನು ತೊಳೆಯುವುದು, ದನಕರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ ಎಂದು ತಹಶೀಲ್ದಾರ್ ಗುರುಬಸವರಾಜ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top