ದಾವಣಗೆರೆ: ವಿನೋಬ ನಗರ ಗಣೇಶ ಮೂರ್ತಿ ವಿಸರ್ಜನೆ, ಈದ್‌ಮಿಲಾದ್ ಹಿನ್ನೆಲೆ; ಎರಡು ದಿನ ಸಂಚಾರಿ ಮಾರ್ಗದಲ್ಲಿ ಬದಲಾವಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ದಾವಣಗೆರೆ: ವಿನೋಬ ನಗರದಲ್ಲಿ ಪ್ರತಿಷ್ಟಾಪಿಸಿರುವ ವರಸಿದ್ಧಿ ವಿನಾಯಕ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸೆಪ್ಟೆಂಬರ್ 4 ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಅಂದು ಬೆಳಿಗ್ಗೆ 11 ರಿಂದ ರಾತ್ರಿ 11 ಗಂಟೆಯವರೆಗೆ ಸಂಚಾರ ಮಾರ್ಗ ಬದಲಾಯಿಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

ಯಾವ ಮಾರ್ಗದಲ್ಲಿ ಬದಲಾವಣೆ

ಹರಿಹರದಿಂದ ದಾವಣಗೆರೆಗೆ ಹಳೆ ಪಿಬಿ ರಸ್ತೆಯ ಮೂಲಕ ಬರುವ ಎಲ್ಲಾ ಭಾರಿ ವಾಹನ, ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳು ಹರಿಹರ ನಗರದಿಂದ ನೇರವಾಗಿ ಶಿವಮೊಗ್ಗ ಬೈಪಾಸ್ ಮುಖಾಂತರ ಹೊಸ ಎನ್‌ಹೆಚ್-48 ರಸ್ತೆಯಿಂದ ಹಾಗೂ ಚಿತ್ರದುರ್ಗ ಕಡೆಯಿಂದ ಬರುವ ಎಲ್ಲಾ ವಾಹನಗಳು ಸಹ ಆವರಗೆರೆ ಹತ್ತಿರದ ಬಾಡಾಕ್ರಾಸ್ ಮುಖಾಂತರ ಬಂದು ಸರಕು ಲಾರಿಗಳು ಡಿಸಿಎಂ ಅಂಡರ್ ಪಾಸ್ ಹತ್ತಿರದ ದನದ ಮಾರ್ಕೇಟ್ ಕ್ರಾಸ್‌ನಿಂದ ಎಪಿಎಂಸಿ ಗೆ ಹೋಗುವುದು.

ಕೆಎಸ್‌ಆರ್‌ಟಿಸಿ ಬಸ್‌ಗಳು ಅದೇ ಮಾರ್ಗವಾಗಿ ಬಾಡಾಕ್ರಾಸ್ ಮುಖಾಂತರ ಆವರಗೆರೆ ಕಡಿಯಿಂದ ನೂತನ ಬಸ್ ನಿಲ್ದಾಣಕ್ಕೆ ಬಂದು ಅದೇ ಮಾರ್ಗವಾಗಿ ಬೆಂಗಳೂರು ಬೆಳಗಾವಿ ಕಡೆಗೆ ಹೋಗುವುದು. ಬಸ್‌ಗಳು ಖಾಸಗಿ ಬಸ್‌ಗಳು ಸಹ ಅದೇ ಆರ್ಗವಾಗಿ ಬಂದು ಎಂ.ಜಿ ಸರ್ಕಲ್ ಮುಖೇನ ನೂತನ ಖಾಸಗಿ ನಿಲ್ದಾಣಕ್ಕೆ ಬಂದು ಅದೇ ಮಾರ್ಗದಲ್ಲಿ ನಿರ್ಗಮಿಸಲು ಸೂಚಿಸಿದೆ.

ಜಿಎಂಐಟಿ ಕಾಲೇಜ್ ಹತ್ತಿರ ತಾತ್ಕಾಲಿಕ ರಸ್ತೆಯ ಬದಿಯಲ್ಲಿ ನಿಲ್ಲಿಸುವಂತಹ ಗೂಡ್ಸ್ ಲಾರಿಗಳನ್ನು ಹಳೇ ಪಿಬಿ ರಸ್ತೆಯ ಎರಡೂ ಬದಿಗಳಲ್ಲಿ ನಿಲ್ಲಿಸದೇ ದೂರದಲ್ಲಿ ಖಾಸಗಿ ಪಾರ್ಕಿಂಗ್ ವ್ಯವಸ್ಥೆ ಮಾಡಕೊಳ್ಳಬೇಕು. ನಗರದ ನೂತನ ಖಾಸಗಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆಗೊಳ್ಳುವ ಬಸ್‌ಗಳು ಎಸಿ ಕಚೇರಿ ವೃತ್ತದಿಂದ ಅರುಣ ಸರ್ಕಲ್ ಮುಖಾಂತರ ಹರಿಹರದ ಕಡೆಗೆ ಹಳೇ ಪಿಬಿ ರಸ್ತೆಗೆ ಬಾರದೇ ಗಾಂಧಿ ವೃತ್ತದ ಮೂಲಕ ಹದಡಿ ರಸ್ತೆ ಯಿಂದ ಕಾರ್ಯಚರಣೆಗೊಳಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಈದ್‌ಮಿಲಾದ್ ಹಿನ್ನೆಲೆ ಮಾರ್ಗ ಬದಲಾವಣೆ

ಸೆಪ್ಟೆಂಬರ್ 5 ರಂದು ಈದ್‌ಮಿಲಾದ್ ಹಬ್ಬದ ಪ್ರಯುಕ್ತ ವಿವಿಧ ಕಡೆ ಮೆರವಣಿಗೆ ನಡೆಸುವುದರಿಂದ ಸುಗಮ ಸಂಚಾರ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಅಂದು ಬೆಳಗ್ಗೆ 11 ರಿಂದ ರಾತ್ರಿ 11 ಗಂಟೆಯವರೆಗೆ ಸಂಚಾರ ಮಾರ್ಗ ಬದಲಾಯಿಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

ಹರಿಹರದಿಂದ ದಾವಣಗೆರೆಗೆ ಹಳೆ ಪಿಬಿ ರಸ್ತೆಯ ಮೂಲಕ ಬರುವ ಎಲ್ಲಾ ಭಾರಿ ವಾಹನ, ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳು ಹರಿಹರ ನಗರದಿಂದ ನೇರವಾಗಿ ಶಿವಮೊಗ್ಗ ಬೈಪಾಸ್ ಮುಖಾಂತರ ಹೊಸ ಎನ್‌ಹೆಚ್-48 ರಸ್ತೆಯಿಂದ ಹಾಗೂ ಚಿತ್ರದುರ್ಗ, ಕಡೆಯಿಂದ ಬರುವ ಎಲ್ಲಾ ವಾಹನಗಳು ಸಹ ಆವರಗೆರೆ ಹತ್ತಿರದ ಬಾಡಾಕ್ರಾಸ್ ಮುಖಾಂತರ ಬಂದು ಸರಕು ಲಾರಿಗಳು ಡಿಸಿಎಂ ಅಂಡರ್ ಪಾಸ್ ಹತ್ತಿರದ ದನದ ಮಾರ್ಕೇಟ್ ಕ್ರಾಸ್‌ನಿಂದ ಎಪಿಎಂಸಿ ಗೆ ಹೋಗುವುದು.

ಕೆಎಸ್‌ಆರ್‌ಟಿಸಿ ಬಸ್‌ಗಳು ಅದೇ ಮಾರ್ಗವಾಗಿ ಬಾಡಾಕ್ರಾಸ್ ಮುಖಾಂತರ ಆವರಗೆರೆ ಕಡಿಯಿಂದ ನೂತನ ಬಸ್ ನಿಲ್ದಾಣಕ್ಕೆ ಬಂದು ಅದೇ ಮಾರ್ಗವಾಗಿ ಬೆಂಗಳೂರು ಬೆಳಗಾವಿ ಕಡೆಗೆ ಹೋಗುವುದು. ಬಸ್‌ಗಳು ಖಾಸಗಿ ಬಸ್‌ಗಳು ಸಹ ಅದೇ ಆರ್ಗವಾಗಿ ಬಂದು ಎಂ.ಜಿ ಸರ್ಕಲ್ ಮುಖೇನ ನೂತನ ಖಾಸಗಿ ನಿಲ್ದಾಣಕ್ಕೆ ಬಂದು ಅದೇ ಮಾರ್ಗದಲ್ಲಿ ನಿರ್ಗಮಿಸಲು ಸೂಚಿಸಿದೆ.

ಚನ್ನಗಿರಿ ಮಾರ್ಗವಾಗಿ ಬರುವ ಕೆಎಸ್‌ಆರ್‌ಟಿಸಿ ಬಸ್‌ಗಳು ಬಾಡಾಕ್ರಾಸ್ ಮೂಲಕ ಆವರಗೆರೆ ಕಡೆಯಿಂದ ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದು ನಂತರ ಅದೇ ಮಾರ್ಗವಾಗಿ ಹಿಂತಿರುಗಬೇಕು. ಖಾಸಗಿ ಬಸ್‌ಗಳು ಮಾಗನೂರು ಬಸಪ್ಪ ಪೆಟ್ರೋಲ್ ಬಂಕ್ ಹತ್ತಿರದ ಮೈದಾನದಲ್ಲಿ ಪಾರ್ಕಿಂಗ್ ಮಾಡಲು ಸ್ಥಳಾವಕಾಶ ಕಲ್ಪಿಸಿದೆ. ಚನ್ನಗಿರಿ ಕಡೆಯಂದ ಬರುವ ಸರಕು ವಾಹನಗಳು ಸಹ ಅದೇ ಮಾರ್ಗವಾಗಿ ತೆರಳಿ ಎಪಿಎಂಸಿ ಮಾರ್ಕೇಟ್‌ನಲ್ಲಿ ಪಾರ್ಕಿಂಗ್ ಮಾಡಬೇಕು. ಜಗಳೂರು ಮತ್ತು ಹರಪನಹಳ್ಳಿ ಕಡೆಯಿಂದ ಬರುವ ಕೆಎಸ್‌ಆರ್‌ಟಿಸಿ ಬಸ್‌ಗಳು ಬೇತೂರು ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಬಸ್ ನಿಲ್ದಾಣಕ್ಕೆ ಬಂದು ನಂತರ ಅದೇ ಮಾರ್ಗವಾಗಿ ಹಿಂತಿರುಗುವುದು.

ಹಾಗೆಯೇ ಈ ಎರಡು ಮಾರ್ಗಗಳಿಂದ ಬರುವ ಖಾಸಗಿ ಬಸ್ ವೆಂಕಟೇಶ್ವರ ವೃತ್ತ, ಗಣೇಶ ಹೋಟೆಲ್ ವೃತ್ತ ಮುಖಾಂತರ ಎಪಿಎಂಸಿ ಮಾರ್ಕೆಟ್‌ನಲ್ಲಿ ಪಾರ್ಕಿಂಗ್ ಮಾಡಲು ಸೂಚಿಸಿದೆ. ಸರಕು ಲಾರಿಗಳು ಸಹ ಇದೇ ಮಾರ್ಗವಾಗಿ ಹಾಗೂ ಕೊಂಡಜ್ಜಿ ಕಡೆಯಿಂದ ಬರುವ ಕೆಎಸ್‌ಆರ್‌ಟಿಸಿ ಬಸ್‌ಗಳು ರಿಂಗ್ ರಸ್ತೆ ಮತ್ತು ಬಂಬೂ ಬಜಾರ್ ಮುಖಾಂತರ ನೂತನ ಬಸ್ ನಿಲ್ದಾಣಕ್ಕೆ ಬಂದು ಅದೇ ಮಾರ್ಗವಾಗಿ ವಾಪಸ್ ಹೋಗುವುದು. ಖಾಸಗಿ ಬಸ್‌ಗಳು ಅದೇ ಮಾರ್ಗವಾಗಿ ಬಂದು ಎಪಿಎಂಸಿ ಮಾರ್ಕೇಟ್ ನಲ್ಲಿ ಪಾರ್ಕಿಂಗ್ ಹಾಗೂ ಸರಕು ವಾಹನಗಳು ಸಹ ಇದೇ ಮಾರ್ಗವಾಗಿ ಸಂಚರಿಸಿ ಎಪಿಎಂಸಿ ಮಾರ್ಕೇಟ್‌ಗೆ ಸಂಚರಿಸಲು ಡಿಸಿ ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *