ದಾವಣಗೆರೆ: ಬಂಡಾಯ ಸಾಹಿತಿ ಬಿ.ಟಿ ಲಲತಾ ನಾಯಕ್ ಹಿಂದೂ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ರಾಮಾಯಣ (Ramayana) ಮಹಾಕಾವ್ಯದಲ್ಲಿರುವ ಶ್ರೀರಾಮ, ಲಕ್ಷ್ಮಣ ಹಾಗೂ ರಾವಣ ಆದರ್ಶ ವ್ಯಕ್ತಿಗಳಲ್ಲ, ಅವರೆಲ್ಲಾ ಕ್ರೂರಿಗಳು ಎಂದು ನಾಲಗೆ ಹರಿಬಿಟ್ಟಿದ್ದಾರೆ.
ದಾವಣಗೆರೆ: ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಸ್ಥಾಪನೆಗೆ ವಡ್ಡಿನಹಳ್ಳಿ ಬಳಿ ಭೂ ಮಂಜೂರಾತಿ
ನಗರದ ಎವಿಕೆ ಕಾಲೇಜಿನಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಮಾತನಾಡಿ, ಶ್ರೀರಾಮ, ಲಕ್ಷ್ಮಣ ಹಾಗೂ ರಾವಣ ಕ್ರೂರಿಗಳು. ಶೂರ್ಪನಖಿಯ ಮೂಗು ಕತ್ತರಿಸಿದ ಲಕ್ಷ್ಮಣ, ಸೀತೆಯ ಮೇಲೆ ಅನುಮಾನಪಟ್ಟು ಕಾಡಿಗಟ್ಟಿದ ರಾಮ ಆದರ್ಶರಾಗಲು ಸಾಧ್ಯವಿಲ್ಲ. ಸೀತೆಯನ್ನ ಅಪಹರಿಸಿ ಜೀವನ ಹಾಳು ಮಾಡಿದ ರಾವಣ ಕೂಡ ಕ್ರೂರಿಯೇ ಎಂದಿದ್ದಾರೆ.
ವಾಯುಭಾರ ಕುಸಿತ | ಎರಡ್ಮೂರು ದಿನ ಭಾರೀ ಮಳೆ ಮುನ್ಸೂಚನೆ
ದೇಗುಲಗಳು ಜನರನ್ನ ಮೌಢ್ಯತೆಗೆ ತಳ್ಳುತ್ತಿವೆ. ಗ್ರಂಥಾಲಯಗಳು ಜ್ಞಾನಾರ್ಜನೆಯತ್ತ ಕರೆದೊಯ್ಯುತ್ತವೆ. ಮೌಢ್ಯಗಳಿಂದ ಹೊರಬರಲು ಶಿಕ್ಷಣವೇ ಪರಿಹಾರ. ಮನುಷ್ಯನ ತಪ್ಪುಗಳೇ ಸಾಹಿತ್ಯ, ಮಹಾಕಾವ್ಯಗಳಾಗಿ ರೂಪಿತಗೊಂಡಿವೆ.
ಶಾಂತಿಯ ಪ್ರತೀಕವಾಗಿರುವ ಬುದ್ಧನ ಕೈಯಲ್ಲಿ ಕತ್ತಿ, ಗುರಾಣಿ, ಖಡ್ಗ ಏನೂ ಇಲ್ಲ. ಮಹಾತ್ಮ ಗಾಂಧೀಜಿ ಕೈಯಲ್ಲಿ ಚರಕ ಮಾತ್ರ ಇದೆ. ಇತ್ತೀಚೆಗೆ ಶ್ರೀರಾಮನ ಕೈಗೆ ಬಿಲ್ಲು, ಬಾಣ ನೀಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.



