ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 176 ಚೀಲ ಪಡಿತರ ಅಕ್ಕಿಯನ್ನು ಆಹಾರ, ಕಂದಾಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ: ಅಡಿಕೆ ತೋಟದ ತಂತಿಬೇಲಿಗೆ ಸಿಲುಕಿ ಚಿರತೆ ಸಾವು
ಹರಿಹರ ತಾಲ್ಲೂಕಿನ ಕುಂಬಳೂರು ಬಳಿಯ ಜಮೀನಿನ ಮಳಿಗೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 176 ಚೀಲ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಇನಾಯತ್ ಎಂಬವರಿಗೆ ಸೇರಿದ ಜಮೀನಿನಲ್ಲಿ ಸಂಗ್ರಹಿಸಿ ಇಡಲಾಗಿತ್ತು.
ದಾವಣಗೆರೆ: ಜಿಲ್ಲೆಯಲ್ಲಿ ಖಾಲಿ ಇರುವ ಕರ್ನಾಟಕ ಒನ್ ಫ್ರಾಂಚೈಸಿ ತೆರೆಯಲು ಅರ್ಜಿ ಆಹ್ವಾನ; ಎಲ್ಲೆಲ್ಲಿ..?
ಅಕ್ಕಿಯ ಮೌಲ್ಯ 1.80 ಲಕ್ಷ ಎಂದು ಅಂದಾಜು ಮಾಡಿದ್ದಾರೆ. ತನಿಖೆ ಮುಂದುವರೆದಿದೆ. ಈ ಕಾರ್ಯಾಚರಣೆಯಲ್ಲಿ ಆಹಾರ ಇಲಾಖೆಯ ಶಿವಕುಮಾರ್, ಪಿಎಸ್ಐಗಳಾದ ಹಾರೂನ್ ಅಖ್ತರ್, ಶ್ರೀಪತಿ ಜಿ. ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಮಲೇಬೆನ್ನೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



