Connect with us

Dvgsuddi Kannada | online news portal | Kannada news online

ದಾವಣಗೆರೆ: ಕೋವಿಡ್ ಸಹಾಯಧನ 3 ಸಾವಿರ ಪಡೆಯದಿರುವ ಕಟ್ಟಡ ಕಾರ್ಮಿಕರು ಮಾಹಿತಿ ನೀಡಲು ನ. 30 ಕೊನೆಯ ದಿನ

Davanagere DC office

ದಾವಣಗೆರೆ

ದಾವಣಗೆರೆ: ಕೋವಿಡ್ ಸಹಾಯಧನ 3 ಸಾವಿರ ಪಡೆಯದಿರುವ ಕಟ್ಟಡ ಕಾರ್ಮಿಕರು ಮಾಹಿತಿ ನೀಡಲು ನ. 30 ಕೊನೆಯ ದಿನ

ದಾವಣಗೆರೆ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕೋವಿಡ್-19 ಎರಡನೇ ಅಲೆಯ ಸಹಾಯಧನದ ಮೊತ್ತ ರೂ.3000/-ಗಳನ್ನು ಕರ್ನಾಟಕ ಸರ್ಕಾರ ಘೋಷಣೆ ಮಾಡಿದ್ದು, ಇದುವರೆಗೂ ಒಂದು ಬಾರಿಯ ಸಹಾಯಧನ ಸ್ವೀಕರಿಸದೇ ಇರುವವರು, ಅಗತ್ಯ ದಾಖಲೆಗಳೊಂದಿಗೆ ನ. 30 ರ ಒಳಗಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಚೇರಿ ಸಂಪರ್ಕಿಸಿ ಮಾಹಿತಿ ನೀಡುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಈಗಾಗಲೇ ರೂ.3000/-ಗಳ ಮೊತ್ತವನ್ನು ನೇರ ನಗದು ವರ್ಗಾವಣೆ (ಡಿಬಿಟಿ ಆಧಾರ್) ಮೂಲಕ ಪಾವತಿಸಲು ಇ-ಗರ‍್ನನ್ಸ್ ಇಲಾಖೆಗೆ ಕಳುಹಿಸಲಾಗಿದ್ದು ಈ ರೀತಿ ಕಳುಹಿಸಲಾದ ಡೇಟಾದಲ್ಲಿ ಶೇ.90 ರಷ್ಟು ಕಾರ್ಮಿಕರಿಗೆ ಸಹಾಯಧನ ಪಾವತಿಯಾಗಿರುತ್ತದೆ ಹಾಗೂ ಉಳಿದ ಶೇ.10ರಷ್ಟು ಕಾರ್ಮಿಕರಿಗೆ ವಿವಿಧ ಕಾರಣಗಳಿಂದ ಪಾವತಿಯಾಗಿರುವುದಿಲ್ಲ. ಫಲಾನುಭವಿಯ ಆಧಾರ್ ಸಂಖ್ಯೆ, ಅವರ ಬ್ಯಾಂಕ್ ಖಾತೆಗೆ ಜೋಡಣೆಯಾಗದಿರುವುದು ಹಾಗೂ ಬ್ಯಾಂಕ್‌ನವರು ಈ ಬ್ಯಾಂಕ್ ಖಾತೆಯನ್ನು ಎನ್‌ಸಿಪಿಐ ಗೆ ಮ್ಯಾಪಿಂಗ್ ಮಾಡಿರುವುದಿಲ್ಲವಾದ ಕಾರಣ ನೋಂದಾಯಿತ ಕಟ್ಟಡ ಕಾರ್ಮಿಕರ ಖಾತೆಗೆ ಸಹಾಯಧನದ ಮೊತ್ತವು ಪಾವತಿಯಾಗಿರುವುದಿಲ್ಲ. ಈ ರೀತಿ ಜೋಡಣೆಯಾಗದಿರುವವರ ಮಾಹಿತಿಯು ಇನ್ಯಾವುದೇ ಕಾರಣದಿಂದ ಸಹಾಯಧನ ದೊರಕದ ಫಲಾನುಭವಿಗಳ ಮಾಹಿತಿಯನ್ನು ಮಂಡಳಿಯ https://karbwwb,karnatak.go.in/page/Covid+19+Relief+DBT+Details/en
ಜಾಲತಾಣದಲ್ಲಿ ಅಪ್‌ಡೇಟ್ ಮಾಡಲು ನ.30 ಕೊನೆಯ ದಿನವಾಗಿರುತ್ತದೆ. ತದನಂತರ ಯಾವುದೇ ಅರ್ಜಿಯನ್ನು ಸಹಾಯಧನ ಮಂಜೂರಾತಿಗೆ ಪರಿಗಣಿಸಲಾಗುವುದಿಲ್ಲ.

ಇದುವರೆಗೂ ಕೋವಿಡ್-19 2ನೇ ಅಲೆಯಲ್ಲಿ ಒಂದು ಬಾರಿಯ ಸಹಾಯಧನ ರೂ.3000/-ವನ್ನು ಮಂಡಳಿಯಿAದ ಸ್ವೀಕರಿಸದೇ ಇರುವ ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಜೋಡಣೆಯಾಗಿರುವ ಬಗ್ಗೆ ಹಾಗೂ ಬ್ಯಾಂಕ್‌ನವರು ಈ ಬ್ಯಾಂಕ್ ಖಾತೆಯನ್ನು ಎನ್‌ಸಿಪಿಐ ಗೆ ಮ್ಯಾಪಿಂಗ್ ಮಾಡಿರುವ ಬಗ್ಗೆ ಖಚಿತಪಡಿಸಿಕೊಂಡು ಅಗತ್ಯ ದಾಖಲೆಗಳೊಂದಿಗೆ ನ.30 ಒಳಗೆ ಜಿಲ್ಲೆಯ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದೆಂದು ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top