ದಾವಣಗೆರೆ: ಕರ್ನಾಟಕ ಸಂಘಗಳ ಆಧಿನಿಯಮ ಅಡಿ 5 ವರ್ಷಗಳಿಗೂ ಮೇಲ್ಪಟ್ಟು ನವೀಕರಣಗೊಳ್ಳದಿರುವ ಸಂಘ ಸಂಸ್ಥೆಗಳಿಗೆ ನವೀಕರಣಕ್ಕಾಗಿ ಕೊನೆಯ ಅವಕಾಶ ನೀಡಲಾಗಿದ್ದು, ಜಿಲ್ಲಾ ವ್ಯಾಪ್ತಿಯಲ್ಲಿನ ಸಂಘ ಸಂಸ್ಥೆಗಳು ಪ್ರತಿ ವರ್ಷಕ್ಕೆ ಹೆಚ್ಚುವರಿ ರೂ. 2000 ರಂತೆ ದಂಡ ಪಾವತಿಸಿ ಮತ್ತು ಅವಶ್ಯ ದಾಖಲೆಗಳನ್ನು ಸಲ್ಲಿಸಿ ಡಿ.31 ರೊಳಗೆ ನವೀಕರಣ ಮಾಡಿಸಿಕೊಳ್ಳಬಹುದಾಗಿರುತ್ತದೆ ಎಂದು ದಾವಣಗೆರೆ ಜಿಲ್ಲಾ ಸಂಘಗಳ ನೋಂದಣಾಧಿಕಾರಿಗಳು ಹಾಗೂ ಸಹಕಾರ ಸಂಘಗಳ ಉಪನಿಬಂಧಕ ಬಿ.ಜಯಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



