ದಾವಣಗೆರೆ: ರಾಜ್ಯ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ನ. 18 ರಂದು ದಾವಣಗೆರೆ ಪ್ರವಾಸ ಹಮ್ಮಿಕೊಂಡಿದ್ದಾರೆ. ಸಚಿವರು ಅಂದು ಬೆಳಿಗ್ಗೆ ಹಿರಿಯೂರಿನಿಂದ ಹೊರಟು ಬೆ. 9-30 ಗಂಟೆಗೆ ದಾವಣಗೆರೆಗೆ ಆಗಮಿಸಿ ಜಿಎಂಐಟಿ ಅತಿಥಿ ಗೃಹಕ್ಕೆ ತೆರಳುವರು. ಬೆಳಿಗ್ಗೆ 11 ಗಂಟೆಗೆ ಪಕ್ಷದ ವತಿಯಿಂದ ಆಯೋಜಿಸಲಾಗಿರುವ ಜನಸ್ವರಾಜ್ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಚಿವರು ಮಧ್ಯಾಹ್ನ 2 ಗಂಟೆಗೆ ಚಿತ್ರದುರ್ಗಕ್ಕೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.



