Connect with us

Dvgsuddi Kannada | online news portal | Kannada news online

ದಾವಣಗೆರೆ: ಪಡಿತರ ವಿತರಣೆಯಲ್ಲಿ ಅಕ್ರಮ; ಕಾನೂನು ಕ್ರಮಕ್ಕೆ ಸಾಲುಮರದ ವೀರಾಚಾರಿ ಮನವಿ

ration raice

ದಾವಣಗೆರೆ

ದಾವಣಗೆರೆ: ಪಡಿತರ ವಿತರಣೆಯಲ್ಲಿ ಅಕ್ರಮ; ಕಾನೂನು ಕ್ರಮಕ್ಕೆ ಸಾಲುಮರದ ವೀರಾಚಾರಿ ಮನವಿ

ದಾವಣಗೆರೆ: ಹರಿಹರ ತಾಲ್ಲೂಕಿನ ಮಿಟ್ಲಕಟ್ಟೆ ಗ್ರಾಮದಲ್ಲಿ ಪಡಿತರ ವಿತರಣೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ಪರಿಸರ ಪ್ರೇಮಿ ಸಾಲುಮರದ ವೀರಾಚಾರಿ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ನಂತರ ಮಾತನಾಡಿದ ವೀರಾಚಾರಿ, ಮಿಟ್ಲಕಟ್ಟೆಯಲ್ಲಿ ಪಡಿತರ ವಿತರಣೆಯ ಪರವಾನಿಗೆ ಪಡೆದಿರುವ ಸಿದ್ದರಾಮಪ್ಪ ಕಳೆದ 20 ತಿಂಗಳಿನಿಂದ ಸರಿಯಾಗಿ ಪಡಿತರ ವಿತರಿಸುತ್ತಿಲ್ಲ. ಸರ್ಕಾರ ಬಡ ಜನರಿಗೆ ಪಡಿತರ ವ್ಯವಸ್ಥೆಯ ಮೂಲಕ ಉಚಿತ ಅಕ್ಕಿ ವಿತರಿಸುತ್ತಿದೆ. ಆದರೆ, ಇದರ ವಿತರಣೆ ಜವಾಬ್ದಾರಿ ಹೊಂದಿರುವ ಸಿದ್ದರಾಮಪ್ಪ ಎಂಬುವರು ಪಡಿತರ ಫಲಾನುಭವಿಗಳಿಗೆ ವಿತರಿಸುವ ಅಕ್ಕಿಯ ತೂಕದಲ್ಲಿ ಕಡಿಮೆ ಕೊಡುವ ಮೂಲಕ ಪ್ರತಿ ತಿಂಗಳು ಬಡವರಿಗೆ ಸೇರಬೇಕಾಗಿರುವ 15 ಕ್ವಿಂಟಲ್ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು ದೂರಿದರು

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಸಮರ್ಪಕ ಪಡಿತರ ವಿತರಣೆಗೆ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ನಾಗೇಂದ್ರಪ್ಪ, ಮನೋಜ್, ಸಿ.ನಿಂಗಪ್ಪ, ಮಲ್ಲೇಶ್.ಎಚ್, ಮಂಜಪ್ಪ, ರಾಜಪ್ಪ, ಶಶಿಧರ, ಅಂಜಿನಪ್ಪ, ಮಂಜಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top