Connect with us

Dvgsuddi Kannada | online news portal | Kannada news online

ದಾವಣಗೆರೆ: ಬಾಬಾ ಸಾಹೇಬರ 65 ನೇ ಮಹಾ ಪರಿನಿರ್ವಾಣ ದಿನಾಚರಣೆ

dvg ambedakar

ದಾವಣಗೆರೆ

ದಾವಣಗೆರೆ: ಬಾಬಾ ಸಾಹೇಬರ 65 ನೇ ಮಹಾ ಪರಿನಿರ್ವಾಣ ದಿನಾಚರಣೆ

ದಾವಣಗೆರೆ: ಸಂವಿಧಾನ ಶಿಲ್ಪಿ, ಜ್ಞಾನ ರತ್ನ, ಭಾರತ ರತ್ನ, ಬಾಬಾಸಾಹೇಬ್ ಡಾ.ಅಂಬೇಡ್ಕರರು ಶಿಕ್ಷಣದಿಂದ ತಮ್ಮ ಜ್ಞಾನದ ಪರಧಿ ಹೆಚ್ಚಿಸಿಕೊಂಡವರು, ಶಿಕ್ಷಣ ಎಂಬ ಅಸ್ತ್ರದಿಂದ ಶೋಷಿತ, ದಮನಿತ ವರ್ಗಗಳಿಗೆ ಧ್ವನಿಯಾದವರು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಅಂಬೇಡ್ಕರರ 65 ನೇ ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಅಂಬೇಡ್ಕರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಬಾಬಾ ಸಾಹೇಬರ ಮೂಲಮಂತ್ರಗಳಾದ ಶಿಕ್ಷಣ, ಸಂಘಟನೆ, ಹೋರಾಟ ಎಂಬ ಧ್ಯೇಯ ವಾಕ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದಲ್ಲಿರುವ ಶೋಷಿತರು, ತುಳಿತಕ್ಕೊಳಪಟ್ಟ ವರ್ಗಗಳಿಗೆ ನ್ಯಾಯ ಕೊಡಬೇಕಾಗಿದೆ ಎಂದರು.

ಹಿಂದೆಲ್ಲಾ ಒಬ್ಬ ವ್ಯಕ್ತಿಯನ್ನು ಅವನಲ್ಲಿದ್ದ ಹಣ, ಅಧಿಕಾರ, ಬಲದಿಂದ ಅಳೆಯಲಾಗುತಿತ್ತು. ಆದರೆ ಇಂದು ಒಬ್ಬ ವ್ಯಕ್ತಿಯನ್ನ ಅವನ ಜ್ಞಾನದಿಂದ ಅಳೆಯಲಾಗುತ್ತಿದೆ, ಅಂತಹ ಜ್ಞಾನ ಸಂಪಾದನೆಗೆ ಅಂಬೇಡ್ಕರರು ಅಂದಿನ ದಿನಗಳಲ್ಲಿಯೇ ಮಹತ್ವ ನೀಡಿದ್ದರು. ಅಂತಹ ಅಪಾರ ಜ್ಞಾನ ಹೊಂದಿದ್ದರಿಂದಲೇ ಅವರು ಪ್ರಪಂಚ ಗುರುತಿಸುವಂತಹ ವ್ಯಕ್ತಿಯಾಗಿದ್ದರು, ಅದರಿಂದಾಗಿ ಇಡೀ ಪ್ರಪಂಚ ಅವರನ್ನು ಗೌರವಿಸುತ್ತಿದೆ, ಅವರ ಆದರ್ಶಗಳನ್ನ ನಾವುಗಳು ಪ್ರತಿ ಹೆಜ್ಜೆಯಲ್ಲಿಯೂ ಪಾಲಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಜಿ.ಪಂ. ಸಿಇಓ ಡಾ. ವಿಜಯ ಮಹಾಂತೇಶ್ ದಾನಮ್ಮನವರ್ ಮಾತನಾಡಿ, ಸಂವಿಧಾನ ಪಿತಾಮಹ ಅಂಬೇಡ್ಕರರ ಜೀವನದ ಹೋರಾಟದ ಕಷ್ಟಗಳು ನಮ್ಮೆಲ್ಲರಿಗೂ ಪರಿಚಿತ, ಅಂದಿನ ದಿನಗಳಲ್ಲಿಯೇ ಉನ್ನತ ಶಿಕ್ಷಣವನ್ನು ಪಡೆಯುವ ಮೂಲಕ ಅತ್ಯಂತ ಶ್ರೇಷ್ಠವಾದ ಸಂವಿಧಾನ ನೀಡಿದ ಹೆಗ್ಗಳಿಕೆ ಅಂಬೇಡ್ಕರ್ ಅವರದು. ನಮ್ಮೊಂದಿಗೆ ಸ್ವಾತಂತ್ರ್ಯ ಪಡೆದ ಅನೇಕ ದೇಶಗಳು ಈಗಲೂ ವಿವಿಧ ಸಮಸ್ಯೆಗಳಲ್ಲಿ ಸಿಲುಕಿವೆ. ವಿವಿಧ ಜಾತಿ, ಧರ್ಮ, ವೈವಿಧ್ಯತೆಯ ಭೌಗೋಳಿಕ ಪರಿಸ್ಥಿತಿ ಹೊಂದಿದ್ದರೂ ನಮ್ಮ ದೇಶ ಒಗ್ಗಟ್ಟಿನಿಂದಿರುವುದಕ್ಕೆ ಸಂವಿಧಾನ ಮುಖ್ಯ ಕಾರಣ. ಅಂತಹ ಶ್ರೇಷ್ಠ ಸಂವಿಧಾನದ ಮೌಲ್ಯಗಳನ್ನ ಕಾಪಾಡಿಕೊಂಡು ಅಂಬೇಡ್ಕರರ ಚಿಂತನೆಯ ಬೆಳಕಿನಲ್ಲಿ ನಾವು ಸಾಗಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶ್ರೀನಿವಾಸ ಪ್ರಭು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಪಶು ಸಂಗೋಪನೆ ಇಲಾಖೆ ಉಪನಿದೇರ್ಶಕ ಡಾ.ಚಂದ್ರಶೇಖರ್ ಸುಂಕದ್, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ, ಸಿಬ್ಬಂದಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಅಂಬೇಡ್ಕರ್ ಅಭಿಮಾನಿಗಳು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top