ದಾವಣಗೆರೆ: ಕೇಂದ್ರ ಸರ್ಕಾರ ಸಾರ್ವಜನಿಕ ವಲಯದ ಬ್ಯಾಂಕ್ ಗಳನ್ನು ಖಾಸಗೀಕರಣಗೊಳಿಸಲು ಮುಂದಾಗಿರುವುದನ್ನು ವಿರೋಧಿಸಿ ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆ ನಾಳೆಯಿಂದ (ಡಿ. 16) ಎರಡು ದಿನ ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ.
ಮುಷ್ಕರದಲ್ಲಿ ದೇಶದಾದ್ಯಂತ ಸುಮಾರು 10 ಲಕ್ಷ ಬ್ಯಾಂಕ್ ನೌಕರರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಮುಷ್ಕರ ಹಿನ್ನೆಲೆ ದಾವಣಗೆರೆಯಲ್ಲಿ ಡಿ. 16 ರಂದು ಮಂಡಿಪೇಟೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಚೇರಿ ಮುಂದೆ ಹಾಗೂ ಡಿ. 17 ರಂದು ಮಂಡಿಪೇಟೆಯ ಕೆನರಾ ಮುಂಭಾಗ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.



