ದಾವಣಗೆರೆ: ದಾವಣಗೆರೆ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ವತಿಯಿಂದ ವಿವಿಧ ಇಲಾಖೆಗಳಲ್ಲಿ ದೊರೆಯುವ ಸೌಲಭ್ಯಗಳು ಮತ್ತು ಸಾಮಾಜಿಕ ಪಿಡುಗುಗಳ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮ ಇಂದು (ಡಿ. 19) ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಪಂಚಾಯತ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಜಾಥಾದಲ್ಲಿ ಭಾಗವಹಿಸುವ ಅಧಿಕಾರಿಗಳು ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಬಾಲ್ಯ ವಿವಾಹ,ಬಾಲ ಕಾರ್ಮಿಕ ಪದ್ಧತಿ, ನೀರು ನೈರ್ಮಲ್ಯ,ಕಡ್ಡಾಯ ಹೆಲ್ಮೆಟ್ ಧಾರಣೆ ಹಾಗೂ ಕೊರೊನಾ ಲಸಿಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಆವರಣದಿಂದ ಬೈಕ್ ಗಳಲ್ಲಿ ಸಾಗುವ ಅಧಿಕಾರಿಗಳ ತಂಡ ಹದಡಿ ರಸ್ತೆ ಸಂತೆಬೆನ್ನೂರು ಮೂಲಕ ಸೂಳೆಕೆರೆ ತಲುಪಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.



