Connect with us

Dvgsuddi Kannada | online news portal | Kannada news online

ಸಾಧು ವೀರಶೈವ ಸಮಾಜದ ಅಧ್ಯಕ್ಷ, ರಾಜ್ಯಸಭೆ ಮಾಜಿ ಸದಸ್ಯ ಕೆ.ಆರ್. ಜಯದೇವಪ್ಪ ಇನ್ನಿಲ್ಲ

IMG 20211223 WA0005

ದಾವಣಗೆರೆ

ಸಾಧು ವೀರಶೈವ ಸಮಾಜದ ಅಧ್ಯಕ್ಷ, ರಾಜ್ಯಸಭೆ ಮಾಜಿ ಸದಸ್ಯ ಕೆ.ಆರ್. ಜಯದೇವಪ್ಪ ಇನ್ನಿಲ್ಲ

ದಾವಣಗೆರೆ: ಸಾಧು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ, ರಾಜ್ಯಸಭೆ ಮಾಜಿ ಸದಸ್ಯ ಕೆ.ಆರ್‌.ಜಯದೇವಪ್ಪ ಅವರು ಇಂದು (ಡಿ.23) ನಿಧನ ಹೊಂದಿದ್ದಾರೆ. ಇವರಿಗೆ 87 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಇವರನ್ನು ಇತ್ತೀಚಿಗೆ ದಾವಣಗೆರೆ ನಗರದ ಎಸ್‌.ಎಸ್‌. ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದರು. ವಿದ್ಯಾ ನಗರದ ಗಣಪತಿ ದೆವಸ್ಥಾನ ಬಳಿ ಇರುವ ಅವರ ನಿವಾಸದಲ್ಲಿ ನಾಳೆ ಮಧ್ಯಾಹ್ನ 1 ಗಂಟೆ ವರೆಗೆ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ನಾಳೆ ಕಂದಗಲ್‌ನ ಜಮೀನಿನಲ್ಲಿ ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನೆರೆವೇರಲಿದೆ.1991-1996ರ ಅವಧಿಯಲ್ಲಿ ರಾಜ್ಯಸಭೆ ಸದಸ್ಯರಾಗಿದ್ದ ಕೆ.ಆರ್‌.ಜಯದೇವಪ್ಪ ಅವರು ಸಾಧು ವೀರಶೈವ ಸಮಾಜದ ಅಧ್ಯಕ್ಷರೂ ಆಗಿದ್ದರು. ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಅನುಯಾಯಿಗಿದ್ದರು. ಇತ್ತೀಚಿನ ದಿನಗಳಲ್ಲಿ ಸಕ್ರಿಯ ರಾಜಕಾರಣದಿಂದ ದೂರವಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top