Connect with us

Dvgsuddi Kannada | online news portal | Kannada news online

ಹರಿಹರ: ಕೃಷಿ ಜಮೀನು, ಕೃಷಿಯೇತರ ಆಸ್ತಿಗಳ ಬೆಲೆ ಪರಿಷ್ಕರಣೆ

Davanagere DC office

ದಾವಣಗೆರೆ

ಹರಿಹರ: ಕೃಷಿ ಜಮೀನು, ಕೃಷಿಯೇತರ ಆಸ್ತಿಗಳ ಬೆಲೆ ಪರಿಷ್ಕರಣೆ

ದಾವಣಗೆರೆ: ಪ್ರಸಕ್ತ ಸಾಲಿಗೆ ಉಪನೋಂದಣಿ ಕಚೇರಿಯ ವ್ಯಾಪ್ತಿಯಲ್ಲಿ ಬರುವ ಹರಿಹರ ನಗರ ಗ್ರಾಮಾಂತರ ಪ್ರದೇಶದ ಕೃಷಿ ಜಮೀನು ಹಾಗೂ ಕೃಷಿಯೇತರ ಆಸ್ತಿಗಳ ಮಾರ್ಗಸೂಚಿ ಬೆಲೆಯನ್ನು ಪರಿಷ್ಕರಿಸಲು ಡಿ.27 ರಂದು ತಹಶೀಲ್ದಾರ್ ಹಾಗೂ  ತಾಲ್ಲೂಕು ಮೌಲ್ಯ ಮಾಪನ ಉಪಸಮಿತಿ ಹರಿಹರ  ಅಧ್ಯಕ್ಷತೆಯಲ್ಲಿ ಜರುಗಿದ ಸರ್ವ ಸದಸ್ಯರ ಸಭೆಯಲ್ಲಿ ನಿರ್ಧರ ಕೈಗೊಳ್ಳಲಾಗಿದೆ.

ಪ್ರಸ್ತುತ  ಚಾಲ್ತಿರುವ  ದರಕ್ಕೆ ಅಲ್ಪ ಬೆಲೆಯಲ್ಲಿ ಪರಿಷ್ಕರಿಸಲು ಸಭೆಯಲ್ಲಿ ಅನುಮೋದನೆ ದೊರೆತಿರುತ್ತದೆ. ಪರಿಷ್ಕೃತ ಮಾರ್ಗಸೂಚಿ ಬೆಲೆಪಟ್ಟಿಯನ್ನು ತಯಾರಿಸಿದ್ದು, ಸಾರ್ವಜನಿಕರು ಸಕಾರಣಗಳೊಂದಿಗೆ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ತಹಶೀಲ್ದಾರ್ ಹಾಗೂ ಉಪನೋಂದಣಾಧಿಕಾರಿಗಳು ಹರಿಹರ ಇವರಿಗೆ ಸಲ್ಲಿಸಬಹುದು. ತಮ್ಮ ಅಹವಾಲುಗಳನ್ನು ತಾಲ್ಲೂಕು ಮೌಲ್ಯಮಾಪನ ಉಪಸಮಿತಿಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು. ಸಮಂಜಸವೆನಿಸಿದಲ್ಲಿ ತಮ್ಮ ಅಹವಾಲನ್ನು ಪರಿಗಣನೆಗೆ ತೆಗೆದುಕೊಂಡು ಕ್ರಮಕೈಗೊಳ್ಳಲಾಗುವುದು. ಹಾಗೂ ಸಮಿತಿಯ ಸರ್ವ ಸದಸ್ಯರು ತೀರ್ಮಾನಿಸಿದಲ್ಲಿ ತಮ್ಮ ಅಹವಾಲನ್ನು ಕೇಂದ್ರೀಯ ಮೌಲ್ಯಮಾಪನ ಸಮಿತಿಗೆ ಕಳುಹಿಸಲಾಗುವುದೆಂದು ಕೇಂದ್ರೀಯ ಮೌಲ್ಯಮಾಪನ ಉಪಸಮಿತಿಯ ಉಪನೋಂದಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top