ದಾವಣಗೆರೆ: ತುಂಗಭದ್ರಾ‌‌ ನದಿಯಲ್ಲಿ ಮೊಸಳೆ ಪತ್ತೆ; ಜನರಲ್ಲಿ ಆತಂಕ, ನದಿಗೆ ಇಳಿಯದಂತೆ ಅರಣ್ಯ ಇಲಾಖೆ‌ ಎಚ್ಚರಿಕೆ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಚೀಲೂರು ಗ್ರಾಮದಲ್ಲಿ ಹರಿಯುತ್ತಿರುವ ತುಂಗಭದ್ರಾ ನದಿಯ ಮಧ್ಯಭಾಗದಲ್ಲಿ ಎರಡು ಮೊಸಳೆಗಳು ಪತ್ತೆಯಾಗಿದ್ದು, ಇಲ್ಲಿನ ಸುತ್ತಮುತ್ತಲು ಗ್ರಾಮದ ಜನರಲ್ಲಿ ಆತಂಕ ಉಂಟು ಮಾಡಿದ್ದು, ನದಿಗೆ‌‌ ಇಳಿಯದಂತೆ ಸಾರ್ವಜನಿಕರಿಗೆ ಅರಣ್ಯ ಇಲಾಖೆ ಎಚ್ಚರಿಕೆ‌‌ ನೀಡಿದೆ.

ಗ್ರಾಮದಲ್ಲಿ ಹರಿಯುತ್ತಿರುವ ನದಿಯಲ್ಲಿ ಎರಡು ಮೊಸಳೆ ಪ್ರತ್ಯಕ್ಷವಾಗಿರುವ ಬಗ್ಗೆ ಗ್ರಾಮಾಡಳಿತ ಅರಣ್ಯ ಇಲಾಖೆಗೆ ಮಾಹಿತಿ ನೀಡಿತ್ತು. ಈ ಬಗ್ಗೆ ಹೊನ್ನಾಳಿ ಉಪವಲಯ ಅರಣ್ಯಾಧಿಕಾರಿ ಎಚ್. ಕೃಷ್ಣಮೂರ್ತಿ ಮತ್ತು ಸಿಬ್ಬಂದಿ ಚಂದ್ರಪ್ಪ, ಬಸವರಾಜ ಸ್ಥಳಕ್ಕೆ ಭೇಟಿ ನೀಡಿ ಮೊಸಳೆಯ ಚಲನವಲನದ ಬಗ್ಗೆ ನಿಗಾವಹಿಸಿದ್ದರು.ಮೊಸಳೆಗಳನ್ನು ಸೆರೆಹಿಡಿಯುವ ತನಕ ನದಿಪಾತ್ರದ ಜನರು, ಮೀನು ಹಿಡಿಯುವವರು ಮತ್ತು ಸಾರ್ವಜನಿಕರು ನದಿಗೆ ಇಳಿಯಬಾರದು ಎಂದು ಅರಣ್ಯಾಧಿಕಾರಿ ಎಚ್. ಕೃಷ್ಣಮೂರ್ತಿ ಸೂಚನೆ ನೀಡಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *