ದಾವಣಗೆರೆ: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ ಅವರು ನಾಳೆ (ಜ.13) ಜಿಲ್ಲಾ ಆಗಮಿಸಲಿದ್ದಾರೆ.
ಸಚಿವರು ಜ.13 ರಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು 9 ಗಂಟೆಗೆ ದಾವಣಗೆರೆ ಪ್ರವಾಸಿ ಮಂದಿರಕ್ಕೆ ಆಗಮಿಸುವರು. ನಂತರ 10 ಗಂಟೆಗೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಕೋವಿಡ್-19ರ ನಿಯಂತ್ರಣದ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಬೆ. 11.30ಕ್ಕೆ ಇದೇ ಸಭಾಂಗಣದಲ್ಲಿ ರೈತರ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30ಕ್ಕೆ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ಸಚಿವರು ಅದೇ ದಿನ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.



