ದಾವಣಗೆರೆ: ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಬಳಿ ತಾತ್ಕಾಲಿಕ ಆಟೋ ನಿಲ್ದಾಣ ನಿರ್ಮಾಣದ ಬಗ್ಗೆ ಮೇಯರ್ ಸ್ಥಳ ಪರಿಶೀಲನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನಗರದ ಹೈಸ್ಕೂಲ್ ಮೈದಾನದಲ್ಲಿ ನಿರ್ಮಿಸಿರುವ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಆಟೋ ನಿಲ್ದಾಣ ನಿರ್ಮಾಣ ಬಗ್ಗೆ ಮೇಯರ್ ಎಸ್.ಟಿ. ವೀರೇಶ್ ಪರಿಶೀಲನೆ ನಡೆಸಿದರು.

ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣವನ್ನು ಹೊಸದಾಗಿ ನಿರ್ಮಾಣ ಹಿನ್ನೆಲೆ ಹೈಸ್ಕೂಲ್ ಮೈದಾನದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಸಾರ್ವಜನಿಕರು ಬಸ್ ಇಳಿದ ನಂತರ ಆಟೋದಲ್ಲಿ ಹೋಗಲು ಸೂಕ್ತ ನಿಲ್ದಾಣ ಇಲ್ಲ. ಎವಿಕೆ ರಸ್ತೆಯಲ್ಲಿ ಆಟೋ ನಿಲ್ಲಿಸಿದರೆ ಪೊಲೀಸ್ ನೆರವು ಮಾಡುತ್ತಿದ್ದು,ಆಟೋ ಚಾಲಕ ಮಾಲೀಕ ಸಂಘದವರು ಆಟೋ ನಿಲ್ದಾಣಕ್ಕೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದರು. ಆಟ ಮೈದಾನ ಪಕ್ಕದಲ್ಲಿ ಗ್ರಿಲ್ ಗಳನ್ನು ತೆಗೆದು ಹೈಸ್ಕೂಲ್ ಮೈದಾನದಿಂದ ಪ್ರಯಾಣಿಕರು ಆಟೋ ಹತ್ತಲು ಅವಕಾಶ ಮಾಡಿ ಕೊಡಲಾಗಿತ್ತು.

ಹೈಸ್ಕೂಲ್ ಮೈದಾನ ಕಡೆ ಗೇಟ್ ತಗೆದಿದ್ದರಿಂದ ಸಾರ್ವಜನಿಕರು ಗೋಡೆ ಹಿಂಭಾಗ ಬಂದು ಮೂತ್ರ ವಿಸರ್ಜನೆ ಮಾಡುತ್ತಿದ್ದು, ಇಲ್ಲಿ ಆಟ ಆಡುವರಿಗೆ ಕ್ರೀಡಾಪಟುಗಳು ಮತ್ತು ವಾಯು ವಿಹಾರಿಗಳಿಗೆ ತುಂಬಾ ತೊಂದರೆ ಆಗುತ್ತಿತ್ತು. ಕೂಡಲೇ ಈ ಗೆಟ್ ಮುಚ್ಚಿಸಲು ಸಾರ್ವಜನಿಕರು ಆಗ್ರಹಿಸಿದ್ದರು.

FB IMG 1617121122236

ಈ ಹಿನ್ನೆಲೆಯಲ್ಲಿ ತಾತ್ಕಾಲಿಕ ಆಟೋ ನಿಲ್ದಾಣ ನಿರ್ಮಾಣ ಕುರಿತು ಮೇಯರ್ ಎಸ್.ಟಿ.ವೀರೇಶ್ ಸ್ಥಳ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಆಟೋ ಚಾಲಕ ಮತ್ತು ಮಾಲೀಕ ಸಂಘದವರು ಇದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *