ದಾವಣಗೆರೆ: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ಸಿಗದೇ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪಿದ್ದಾರೆ ಎಂದು ಸಂಬಂಧಿಕರು ಆರೋಪ ಮಾಡಿದ್ದಾರೆ.
ದಾವಣಗೆರೆ ನಿವಾಸಿ ಹನುಮಂತರಾವ್ (65) ಸಾವಿಗೀಡಾದ ವ್ಯಕ್ತಿ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ಆಯಂಬುಲೆನ್ಸ್ನಲ್ಲಿ ಕರೆದುಕೊಂಡು ಬರಲಾಗಿತ್ತು.ಆದರೆ ಆಸ್ಪತ್ರೆ ಸಿಬ್ಬಂದಿ ಕೂಡಲೇ ದಾಖಲಿಸಿಕೊಳ್ಳಲಿಲ್ಲ. ಆಯಂಬುಲೆನ್ಸ್ನಲ್ಲೇ ಅರ್ಧ ಗಂಟೆ ಉಸಿರಾಟ ತೊಂದರೆಯಿಂದ ಪರದಾಡಿದ್ದಾರೆ.ಆದರೆ, ಮಾರ್ಗ ಮಧ್ಯದಲ್ಲಿ ರೋಗಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳುತ್ತಿದ್ದಾರೆ. ಇದು ವೈದ್ಯರ ನಿರ್ಲಕ್ಷ್ಯದಿಂದಲೇ ಈ ಸಾವು ಸಂಭವಿಸಿದೆ ಎಂದು ಹನುಮಂತರಾವ್ ಅವರ ಪುತ್ರ ಆರೋಪಿಸಿದ್ದಾರೆ.



