Connect with us

Dvgsuddi Kannada | online news portal | Kannada news online

ದಾವಣಗೆರೆ: ಸ್ಮಾರ್ಟ್ ಸಿಟಿ ವಿವಿಧ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಚಾಲನೆ

ದಾವಣಗೆರೆ

ದಾವಣಗೆರೆ: ಸ್ಮಾರ್ಟ್ ಸಿಟಿ ವಿವಿಧ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಚಾಲನೆ

ದಾವಣಗೆರೆ: ಸ್ಮಾಟ್ ಸಿಟಿ ವಿವಿಧ ಕಾಮಗಾರಿಗಳಿಗೆ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ‌ ಬಸವರಾಜ ಚಾಲನೆ ನೀಡಿದರು.

ಸ್ಮಾರ್ಟ್ ಸಿಟಿ ವತಿಯಿಂದ ಹಮ್ಮಿಕೊಳ್ಳಲಾದ 10 ಕೋಟಿ ವೆಚ್ಚದ ರಿಂಗ್ ರಸ್ತೆ, 5ಕೋಟಿ ವೆಚ್ಚದ ಲೇಸರ್ ಷೋ, 6 ಕೋಟಿ ವೆಚ್ಚದ ಥೀಮ್ ಪಾರ್ಕ್,4 ಕೋಟಿ ವೆಚ್ಚದ ವಿದ್ಯುತ್ ಚಿತಾಗಾರಗಳ ಕಾಮಗಾರಿಗಳ ಲೋಕಾರ್ಪಣೆಗೊಳಿಸಿದರು.

ನಂತರ ಮಾತನಾಡಿದ ಅವರುಅವರು, ಸ್ಮಾರ್ಟ್‍ಸಿಟಿ ಕಾಮಗಾರಿಗಳು 2023 ರ ಮಾರ್ಚ್ ತಿಂಗಳಲ್ಲಿ ಪೂರ್ಣಗೊಳ್ಳಲಿವೆ, ಜೂನ್ ವರಗೆ ಕಾಮಗಾರಿಗಳ ಮಾಡಲು ಅವಕಾಶವಿದ್ದರೂ 3 ತಿಂಗಳು ಮೊದಲೇ ಮುಗಿಯಲಿವೆ. ಕಾಮಗಾರಿಗಳ ಗುಣಮಟ್ಟದ ಬಗೆಗೆ ದೂರುಗಳಿದ್ದರೆ ಗಮನಕ್ಕೆ ತಂದರೆ ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಮತ್ತೊಂದು ಚಿತಾಗಾರಕ್ಕೆ ಬೇಡಿಕೆ ಇದ್ದು ಚಿತಾಗಾರಕ್ಕೆ ಟೆಂಡರ್ ಕರೆಯಲು ಸೂಚಿಸಲಾಗಿದೆ. ಮಂಡಕ್ಕಿ ಭಟ್ಟಿ ಪ್ರದೇಶದ ಅಭಿವೃದ್ದಿ ಕೂಡ ಆಗಿದೆ ಆದರೆ ಮಂಡಕ್ಕಿ ಭಟ್ಟಿ ಸ್ಥಳಾಂತರಕ್ಕೆ ಸಮಯ ಹಿಡಿಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕರಾದ ಎಸ್,ಎ,ರವೀಂದ್ರನಾಥ್,ಮಹಾಪೌರರಾದ ಎಸ್,ಟಿ,ವೀರೇಶ್,ದೂಡ ಅಧ್ಯಕ್ಷರಾದ ದೇವರಮನೆ ಶಿವಕುಮಾರ್,ಪಾಲಿಕೆ ಸದಸ್ಯರಾದ ಶಿಲ್ಪ,ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ,ಸಿಇಓ ವಿಜಯ ಮಹಾಂತೇಶ ದಾನಮ್ಮನವರ್,ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಸ್ಮಾರ್ಟ್ ಸಿಟಿ ಎಂ.ಡಿ. ರವೀಂದ್ರ ಮಲ್ಲಾಪುರೆ ಹಾಗೂ ದಾವಣಗೆರೆ ವಿವಿ ಕುಲಪತಿ ಶರಣಪ್ಪ ವಿ ಹಲಸೆ, ಉಪ ಮಹಾಪೌರರಾದ ಶಿಲ್ಪಾ ಜಯಪ್ರಕಾಶ್, ಪಾಲಿಕೆ ಸದಸ್ಯರಾದ ಉಮಾ ಪ್ರಕಾಶ್, ರೇಖಾ ಸುರೇಶ್ ಗಂಡಗಳೆ, ಇತರೆ ಅಧಿಕಾರಿಗಳು ಇದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top