Connect with us

Dvgsuddi Kannada | online news portal | Kannada news online

ದಾವಣಗೆರೆ: ರ್ಕಾರದ ವಿವಿಧ ನಿಗಮಗಳ ಫಲಾನುಭವಿ ಆಯ್ಕೆಗೆ ಫೆ. 05 ರಂದು ಸಭೆ

ದಾವಣಗೆರೆ

ದಾವಣಗೆರೆ: ರ್ಕಾರದ ವಿವಿಧ ನಿಗಮಗಳ ಫಲಾನುಭವಿ ಆಯ್ಕೆಗೆ ಫೆ. 05 ರಂದು ಸಭೆ

ದಾವಣಗೆರೆ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಡಿ ಬರುವ ವಿಶ್ವಕರ್ಮ ನಿಗಮ, ಉಪ್ಪಾರ ನಿಗಮ, ಅಂಬಿಗ ನಿಗಮ, ಮಡಿವಾಳ ನಿಗಮ, ಸವಿತಾ ನಿಗಮ, ಅಲೆಮಾರಿ/ಅರೆ ಅಲೆಮಾರಿ ನಿಗಮ ಹಾಗೂ ಆರ್ಯವೈಶ್ಯ ಸಮುದಾಯಗಳ ಹಿಂದುಳಿದ ವರ್ಗಗಳ ಅರ್ಜಿದಾರರುಗಳಿಗೆ 2021-22ನೇ ಸಾಲಿನ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳ ಆಯ್ಕೆ ಮಾಡಲು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಒಳಗೊಂಡ ಆಯ್ಕೆ ಸಮಿತಿ ಸಭೆ ಫೆ.05 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ತಿಳಿಸಿದ ನಿಗಮಗಳಡಿ ಸಾಲ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಹಾಗೂ ಆಸಕ್ತ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎನ್.ಆರ್ ಶೇಖರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top