Connect with us

Dvgsuddi Kannada | online news portal | Kannada news online

ದಾವಣಗೆರೆ: ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ಕೆ ಜಿಲ್ಲಾಧಿಕಾರಿ ಚಾಲನೆ

ದಾವಣಗೆರೆ

ದಾವಣಗೆರೆ: ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ಕೆ ಜಿಲ್ಲಾಧಿಕಾರಿ ಚಾಲನೆ

ದಾವಣಗೆರೆ:  ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ದಾವಣಗೆರೆ ವ್ಯಾಪ್ತಿಯಲ್ಲಿ ನೋಂದಾಯಿತ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣೆ ಮತ್ತು ತರಬೇತಿ ಒದಗಿಸುವ ಯೋಜನೆಗೆ ಶುಕ್ರವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಸಾಂಕೇತಿಕವಾಗಿ ಚಾಲನೆ ನೀಡಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಜಿ. ಇಬ್ರಾಹಿಂ ಸಾಬ್ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 28,500 ಕಟ್ಟಡ ಕಾರ್ಮಿಕರಿಗೆ ಉಚಿತ ತಪಾಸಣಾ ಶಿಬಿರವನ್ನು ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲೇ ತೆರಳಿ ಅವರಿಗೆ ಕಣ್ಣು, ಕಿವಿ ಹಾಗೂ ಉಸಿರಾಟದ ತೊಂದರೆ ಇದ್ದವರಿಗೆ ತಪಾಸಣೆ ಮಾಡಿ ತಕ್ಷಣ ವರದಿ ನೀಡಲಾಗುತ್ತದೆ. ಒಟ್ಟು 20ಕ್ಕೂ ಹೆಚ್ಚು ಆರೋಗ್ಯ ತಪಾಸಣೆ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಜಿಲ್ಲಾದ್ಯಂತ ಒಂದೂವರೆ ತಿಂಗಳು ಈ ಸೇವೆ ಲಭ್ಯವಿದ್ದು ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ದಾವಣಗೆರೆ ಆರೈಕೆ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ರವಿಕುಮಾರ್ ಮಾತನಾಡಿ, ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ತಪಾಸಣಾ ಮತ್ತು ತರಬೇತಿ ಶಿಬಿರವನ್ನು ರಾಜ್ಯಾದ್ಯಂತ ಆಯೋಜಿಸಲಾಗಿದ್ದು ಮುನ್ನೆಚ್ಚರಿಕಾ ಆರೋಗ್ಯ ರಕ್ಷಣೆ ಮತ್ತು ಔಷಧಗಳು ಕಾರ್ಮಿಕರನ್ನು ಅನಾರೋಗ್ಯದಿಂದ ರಕ್ಷಿಸುವುದರ ಜೊತೆಗೆ ಭವಿಷ್ಯದ ಕಾಯಿಲೆಗಳಿಂದ ರಕ್ಷಿಸುತ್ತವೆ. ಹೀಗಾಗಿ ಎಲ್ಲರೂ ಶಿಬಿರಗಳಲ್ಲಿ ಭಾಗವಹಿಸಿ ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.ಇದೇ ಸಂದರ್ಭದಲ್ಲಿ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತೆ ಎಸ್.ಆರ್. ವೀಣಾ, ಆರೈಕೆ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಗೂ ಕಾರ್ಮಿಕರು ಹಾಜರಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top