ದಾವಣಗೆರೆ: ಏಪ್ರಿಲ್ ವೇಳೆಗೆ ಖಾಸಗಿ ಬಸ್ ನಿಲ್ದಾಣ ಉದ್ಘಾಟನೆಗೆ ಸಿದ್ಧಗೊಳ್ಳಬೇಕು; ಸಂಸದ ಜಿ.ಎಂ. ಸಿದ್ದೇಶ್ವರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಏಪ್ರಿಲ್  ವೇಳೆಗೆ  ನಗರದ ಖಾಸಗಿ ಬಸ್ ನಿಲ್ದಾಣ ಉದ್ಘಾಟನೆಗೆ ಸಿದ್ಧಗೊಳ್ಳಬೇಕು ಎಂದು ಗುತ್ತಿಗೆದಾರರಿಗೆ  ಸಂಸದ ಜಿ.ಎಂ. ಸಿದ್ದೇಶ್ವರ ಗಡುವು ನೀಡಿದ್ದಾರೆ.

ಖಾಸಗಿ ಬಸ್ ನಿಲ್ಲಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಂತರ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ವತಿಯಿಂದ 2019 ರಲ್ಲಿ ಖಾಸಗಿ ಬಸ್ ನಿಲ್ದಾಣ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಲಾಗಿತ್ತು. 2021ಕ್ಕೆ ಕಾಮಗಾರಿ ಮುಗಿಸಬೇಕಿತ್ತು.  ಆದರೆ, 2022 ಬಂದರೂ ಕಾಮಗಾರಿ ಮುಗಿದಿಲ್ಲ. ಅಧಿಕಾರಿಗಳು ಮತ್ತು ಗುತ್ತಿಗೆದಾರರ ಬೇಜವಾಬ್ದಾರಿಯಿಂದ ಕಾಮಗಾರಿ ವಿಳಂಬವಾಗುತ್ತಿದೆ. ಇನ್ನು ಬಹಳ ಕೆಲಸ ಬಾಕಿ ಉಳಿದಿದೆ. ಅಧಿಕಾರಿಗಳು ಸಬೂಬು ಹೇಳುವುದನ್ನು ಬಿಟ್ಟು ಏಪ್ರಿಲ್ ವೇಳೆಗೆ ಖಾಸಗಿ ಬಸ್ ನಿಲ್ದಾಣ ಉದ್ಘಾಟನೆಗೆ ಸಿದ್ಧಗೊಳ್ಳಬೇಕು ಎಂದು  ಎಚ್ಚರಿಕೆ ನೀಡಿದರು.

15ರಿಂದ 20 ಬಸ್ ನಿಲ್ಲಲು ವ್ಯವಸ್ಥೆ, ವ್ಯಾಪಾರ ಮಳಿಗೆಗಳು, ಕ್ಯಾಂಟೀನ್, ರೆಸ್ಟ್ ರೂಮ್ ವಿವಿಧ ಸೌಕರ್ಯವನ್ನು ನೂತನ ಬಸ್ ನಿಲ್ದಾಣ ಹೊಂದಿದೆ.  ಇಲ್ಲಿನ ಮಳಿಗೆಗಳನ್ನು ಪಾಲಿಕೆ ಮೂಲಕ ಟೆಂಡರ್ ಕರೆದು ಯಾರು ಹೆಚ್ಚು ಬಿಡ್ ಮಾಡುತ್ತಾರೋ ಅವರಿಗೆ ನೀಡಲಾಗುವುದು. ಸಬ್ ಟೆಂಡರ್ ನೀಡುವವರಿಗೆ ಯಾವುದೇ ಕಾರಣಕ್ಕೂ ಮಳಿಗೆ ನೀಡಬಾರದು ಎಂದು ಅಧಿಕಾರಿಗೆ ಸೂಚನೆ ನೀಡಿದ್ಧೇನೆ ಎಂದು ಹೇಳಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *