ದಾವಣಗೆರೆ: ಹರಿಹರ ತಾಲ್ಲೂಕಿನ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ ಪಡಿತರ ಧಾನ್ಯಗಳನ್ನು ಹರಾಜು ಮೂಲಕ ವಿಲೇಪಡಿಸಲು ಜಿಲ್ಲಾಧಿಕಾರಿ ಅದೇಶಿಸಿದ್ದಾರೆ.
ಕಚೇರಿಯ ಹರಾಜು ಇಸ್ತಿಹಾರ್ ಪ್ರಕಟಣೆಯಲ್ಲಿ ಒಟ್ಟು 86.30 ಕ್ವಿಂಟಾಲ್ ಅಕ್ಕಿ ಮತ್ತು 2.25 ಕ್ವಿಂಟಾಲ್ ರಾಗಿ ದಾಸ್ತಾನವನ್ನು ಹರಾಜು ಮೂಲಕ ವಿಲೇವಾರಿ ಮಾಡಲು ಮಾ.08 ರಂದು ಮಂಗಳವಾರ ಬೆಳಗ್ಗೆ 10 ಗಂಟೆಗೆ ಹರಿಹರದ ಎ.ಪಿ.ಎಂ.ಸಿ ಆವರಣದಲ್ಲಿರುವ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿ ಬಹಿರಂಗ ಹರಾಜು ಹಮ್ಮಿಕೊಳ್ಳಲಾಗಿದ್ದು, ದಾಸ್ತಾನನ್ನು ನೋಡಲಿಚ್ಛಿಸುವವರು ಹರಿಹರ ಎ.ಪಿ.ಎಂ.ಸಿ ಯಲ್ಲಿರುವ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮಿನಲ್ಲಿ ಕಛೇರಿ ಕೆಲಸದ ಅವಧಿಯಲ್ಲಿ ಪರಿಶೀಲಿಸಬಹುದೆಂದು ಹರಿಹರ ತಾಲ್ಲೂಕು ಹರಿಹರ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



