Connect with us

Dvgsuddi Kannada | online news portal | Kannada news online

ದಾವಣಗೆರೆ: ಮನೆ, ಸೈಟ್ ಮಂಜುರಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದಾವಣಗೆರೆ

ದಾವಣಗೆರೆ: ಮನೆ, ಸೈಟ್ ಮಂಜುರಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದಾವಣಗೆರೆ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ದಾವಣಗೆರೆ ಜಿಲ್ಲಾ ಕಚೇರಿಯಲ್ಲಿ ಪ್ರಸಕ್ತ ಸಾಲಿನ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಅತಿಸೂಕ್ಷ್ಮ ಸಮುದಾಯಗಳ ಜನಾಂಗದವರಿಂದ ವಸತಿ ರಹಿತ ನಿವೇಶನ(ಸೈಟ್) ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿಕೊಡಲು ಮನೆ(ವಸತಿ)ನಿರ್ಮಾಣ ಯೋಜನೆ ಕಲ್ಪಿಸಲು ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾ. 15 ರವರೆಗೆ ಅವಧಿ ವಿಸ್ತರಿಸಲಾಗಿದೆ.

ಈ ಮೊದಲು ಫೆ.28 ರವರೆಗೆ ದಿನಾಂಕ ನಿಗದಿಗೊಳಿಸಲಾಗಿತ್ತು. ಆದರೆ ಸಮುದಾಯದ ಅನೇಕ ಮುಖಂಡರುಗಳ ಕೋರಿಕೆಯ ಮೇರೆಗೆ ಆಫ್‍ಲೈನ್ ಹಾಗೂ ಆನ್‍ಲೈನ್ ಅರ್ಜಿ ಸಲ್ಲಿಸುವ ದಿನಾಂಕವನ್ನು ಮಾ.15 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08192-233309 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top