Connect with us

Dvgsuddi Kannada | online news portal | Kannada news online

ದಾವಣಗೆರೆ: ದೇವರ ಹೆಸರಿನಲ್ಲಿ ಪ್ರಾಣಿಗಳ ಬಲಿ, ಮಾರಕಾಸ್ತ್ರ ತರುವುದು ನಿಷೇಧ: ಜಿಲ್ಲಾಧಿಕಾರಿ

ದಾವಣಗೆರೆ

ದಾವಣಗೆರೆ: ದೇವರ ಹೆಸರಿನಲ್ಲಿ ಪ್ರಾಣಿಗಳ ಬಲಿ, ಮಾರಕಾಸ್ತ್ರ ತರುವುದು ನಿಷೇಧ: ಜಿಲ್ಲಾಧಿಕಾರಿ

ದಾವಣಗೆರೆ: ದಾವಣಗೆರೆ ನಗರದಲ್ಲಿ ನಗರ ದೇವತೆ ಶ್ರೀ ದುರ್ಗಾಂಬಿಕಾದೇವಿ ದೇವಸ್ಥಾನ ಟ್ರಸ್ಟ್‍ ವತಿಯಿಂದ  ಮಾ.13 ರಿಂದ ಮಾ.16 ರವರೆಗೆ ನಗರ ದೇವತೆ ಶ್ರೀ ದುರ್ಗಾಂಬಿಕಾದೇವಿ ಜಾತ್ರೆಯು ಜರುಗಲಿದೆ.  ಜತೆಗೆ ವಿನೋಬನಗರದ ಶ್ರೀ ಚೌಡೇಶ್ವರಿ ದೇವಿ ಜಾತ್ರೆಯೂ ನಡೆಯಲಿದೆ.  ಈ ಜಾತ್ರೆಗೆ ಲಕ್ಷಾಂತರ ಭಕ್ತಾಧಿಗಳು ಆಗಮಿಸಿಲಿದ್ದು, ದೇವಸ್ಥಾನದ ಅಥವಾ ಜಾತ್ರಾ ಆವರಣದ ಪ್ರದೇಶದೊಳಗೆ ದೇವರ ಹೆಸರಿನಲ್ಲಿ ಪ್ರಾಣಿಗಳ ಬಲಿ ನೀಡುವುದು ಹಾಗೂ ಮಾರಕಾಸ್ತ್ರ ತರುವುದು ಕಾನೂನಿಗೆ ವಿರುದ್ಧವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ಧಾರೆ.

ಸಾರ್ವಜನಿಕ ಹಿತದೃಷ್ಟಿಯಿಂದಾಗಿ, ಪರಿಸರ ನೈರ್ಮಲ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಾ.13 ರಿಂದ ಮಾ.16 ರವರೆಗೆ ದೇವಿ ಜಾತ್ರೆ ಸಂದರ್ಭದಲ್ಲಿ ಪ್ರಾಣಿಬಲಿ ನೀಡುವುದನ್ನು ನಿಷೇಧಿಸುವುದು ಅಗತ್ಯ ಎಂದು ಕಂಡುಬಂದಿರುವ ಹಿನ್ನಲೆಯಲ್ಲಿ ಮಾರಕಾಸ್ತ್ರಗಳನ್ನು ತರುವುದು ಹಾಗೂ ಇತರೆ ಅನಾಗರಿಕ ಪದ್ಧತಿಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಅದೇಶಿಸಿದ್ದಾರೆ.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top