Connect with us

Dvgsuddi Kannada | online news portal | Kannada news online

ವಿಕಲಚೇತನರ ದತ್ತಾಂಶ ಸಂಗ್ರಹ ಕಾರ್ಯ ಆರಂಭ; ಸೂಕ್ತ ಮಾಹಿತಿ ನೀಡಲು ಮನವಿ

ದಾವಣಗೆರೆ

ವಿಕಲಚೇತನರ ದತ್ತಾಂಶ ಸಂಗ್ರಹ ಕಾರ್ಯ ಆರಂಭ; ಸೂಕ್ತ ಮಾಹಿತಿ ನೀಡಲು ಮನವಿ

ದಾವಣಗೆರೆ: ಕರ್ನಾಟಕ ಸರ್ಕಾರ ಇ-ಗೌರ್ನೆನ್ಸ್ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ ವತಿಯಿಂದ ಕೌಟುಂಬಿಕ ದತ್ತಾಂಶ ಯೋಜನೆಯಡಿ ದಾವಣಗೆರೆ ಜಿಲ್ಲೆಯ ವಿಕಲಚೇತನರ ಡಾಟಾ ಎಂಟ್ರಿ ಮಾಡಿಸುವುದು ಕಡ್ಡಾಯವಾಗಿದ್ದು, ವಿಕಲಚೇತನರು ಮಾಹಿತಿ ನೀಡಿ ಸಹಕರಿಸುವಂತೆ ಮನವಿ ಮಾಡಲಾಗಿದೆ.

ಈಗಾಗಲೇ 16,000 ವಿಕಲಚೇತನರ ಡಾಟಾ ಎಂಟ್ರಿ ಮಾಡಲಾಗಿದೆ. ಅದರಂತೆ ಚನ್ನಗಿರಿ ಪುರಸಭೆ ವ್ಯಾಪ್ತಿಯಲ್ಲಿ ಯು.ಆರ್.ಡಬ್ಲ್ಯೂ ಹುದ್ದೆ ಖಾಲಿ ಇದ್ದ ಕಾರಣ ಡಾಟಾ ಎಂಟ್ರಿ ಆಗಿರುವುದಿಲ್ಲ. ಹೀಗಾಗಿ ಏ.14 ರಿಂದ 17 ರವರೆಗೆ ಡಾಟಾ ಎಂಟ್ರಿ ಮಾಡಲು ಅವಶ್ಯವಿರುವ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಸಂಗ್ರಹಿಸಲು 20 ವಿ.ಆರ್.ಡಬ್ಲ್ಯೂ, ಎಂ.ಆರ್.ಡಬ್ಲ್ಯೂ ಮತ್ತು ಯು.ಆರ್.ಡಬ್ಲ್ಯೂ ಪುನರ್‍ವಸತಿ ಕಾರ್ಯಕರ್ತರನ್ನು ನಿಯೋಜಿಸಲಾಗಿದೆ.

ಚನ್ನಗಿರಿ ಪುರಸಭೆಯ ವ್ಯಾಪ್ತಿಯ ಎಲ್ಲಾ ವಿಕಲಚೇತನರು ಈ ಮಾಹಿತಿಯನ್ನು ನೀಡಿ ಸಹಕರಿಸಲು ಕೋರಿದೆ. ವಿಕಲಚೇತನರಿಗೆ ಸಂಬಂಧಿಸಿದ ದತ್ತಾಂಶ ದಾಖಲು ಮಾಡಿಸದೇ ಇದ್ದಲ್ಲಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ತೊಂದರೆಯಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕೆ. ಸುಬ್ರಮಣ್ಯಂ, ಎಂ.ಆರ್.ಡಬ್ಲ್ಯೂ, ದೂರವಾಣಿ ಸಂಖ್ಯೆ 9945738141 ಸಂಖ್ಯೆ ಇವರಿಗೆ ಸಂಪರ್ಕಿಸಬಹುದು. ಅಥವಾ ವಿಕಲಚೇತನರ ಸಹಾಯವಾಣಿ ಅಥವಾ ಮಾಹಿತಿ ಸಲಹಾ ಕೇಂದ್ರದ ದೂರವಾಣಿ ಸಂಖ್ಯೆ 08192-263939 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top