ದಾವಣಗೆರೆ: ಬಾಬು ಜಗಜೀವನರಾಂ, ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿನ ಡಾ. ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ವರ್ಷ ಏಪ್ರಿಲ್ 05 ರಂದು ಡಾ|| ಬಾಬು ಜಗಜೀವನರಾಂ ರವರ ಹಾಗೂ ಏಪ್ರಿಲ್ 14 ರಂದು ಡಾ||  ಬಿ.ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ವಿಜೃಂಬಣೆಯಿಂದ ಆಚರಿಸಲಾಗುತ್ತದೆ. ಅದರಂತೆ 2022-23ನೇ ಸಾಲಿನಲ್ಲೂ ಸಹ ಏ. 05 ರಂದು ಡಾ|| ಬಾಬು ಜಗಜೀವನರಾಂ ರವರ 115ನೇ ಜನ್ಮ ದಿನಾಚರಣೆ ಮತ್ತು ಏ. 14 ರಂದು ಡಾ|| ಬಿ.ಆರ್.ಅಂಬೇಡ್ಕರ್ ರವರ 131ನೇ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ.ಜಾತಿ/ಪ.ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ 2022-23ನೇ ಸಾಲಿನ ಡಾ|| ಬಾಬು ಜಗಜೀವನರಾಂ ಹಾಗೂ ಡಾ|| ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿದ್ದು, ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಒಬ್ಬ ವ್ಯಕ್ತಿ ಒಂದು ಪ್ರಶಸ್ತಿಗೆ ಮಾತ್ರ ಅರ್ಜಿ ಸಲ್ಲಿಸಬೇಕು, ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 35 ವರ್ಷವಾಗಿರಬೇಕು. ಯಾವುದೇ ಜನಾಂಗದ ವ್ಯಕ್ತಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರಬಾರದು. ಒಂದು ಪ್ರಶಸ್ತಿಗೆ ಒಬ್ಬ ವ್ಯಕ್ತಿಯಂತೆ ಶಿಫಾರಸ್ಸು ಮಾಡಿ ಸರ್ಕಾರಕ್ಕೆ ಸಲ್ಲಿಸಲಾಗುವುದು. ಪ್ರಶಸ್ತಿಯನ್ನು ಡಾ|| ಬಾಬು ಜಗಜೀವನರಾಂ ಹಾಗೂ ಡಾ|| ಬಿ.ಆರ್.ಅಂಬೇಡ್ಕರ್ ರವರ ಜಯಂತಿ ದಿನದಂದು ಪ್ರದಾನ ಮಾಡಲಾಗುವುದು.

ಆಸಕ್ತರು ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ರೂಂ ನಂ-37, ಜಿಲ್ಲಾಡಳಿತ ಭವನ, ಕರೂರು ಇಂಡಸ್ಟ್ರೀಯಲ್ ಏರಿಯಾ, ದಾವಣಗೆರೆ ಇಲ್ಲಿಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಮಾ. 21 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-231782 ಕ್ಕೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *