Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾಯಕ್ರಮ

ದಾವಣಗೆರೆ

ದಾವಣಗೆರೆ: ನಾಳೆ ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾಯಕ್ರಮ

ದಾವಣಗೆರೆ: ಇದೇ ಮಾ.19 ರಂದು ದಾವಣಗೆರೆ ತಾಲ್ಲೂಕು ಕೋಡಿಹಳ್ಳಿ ಮತ್ತು ಕಕ್ಕರಗೊಳ್ಳ ಗ್ರಾಮದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಒಳಗೊಂಡಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಂದಾಯ ಇಲಾಖೆಯ ವಿವಿಧ ಸೇವೆಗಳು ಅಥವಾ ಯೋಜನೆಗಳಾದ ಪೌತಿ ಖಾತೆ ಬದಲಾವಣೆ, ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಸೌಲಭ್ಯ, ಅತಿವೃಷ್ಠಿ ಅಥವಾ ಬರಪರಿಹಾರ, ಪಡಿತರ ಚೀಟಿ, ಪಹಣಿ ಲೋಪದೋಷ ತಿದ್ದುಪಡಿ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

ಉಳಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಆಯಾ ತಹಶೀಲ್ದಾರರು ಹಾಗೂ ತಾಲ್ಲೂಕು ಮಟ್ಟದ ಇತರೆ ಅಧಿಕಾರಿಗಳು ಸಹ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದು ಒಟ್ಟಾರೆ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ.

ವಿವಿಧೆಡೆ ಗ್ರಾಮ ವಾಸ್ತವ್ಯದ ವಿವರ : ಮಾ. 19 ರಂದು ಹರಿಹರ ತಾಲ್ಲೂಕಿನ ಕಸಬಾ ಹೋಬಳಿಯ ಕೊಂಡಜ್ಜಿ ಗ್ರಾಮ. ಹೊನ್ನಾಳಿ ತಾಲ್ಲೂಕಿನ ಕಸಬಾ ಹೋಬಳಿಯ ಅರಬಘಟ್ಟ. ಚನ್ನಗಿರಿ ತಾಲ್ಲೂಕಿನ ಕಸಬಾ ಹೋಬಳಿಯ ಹೊದಿಗೆರೆ. ಜಗಳೂರು ತಾಲ್ಲೂಕಿನ ಸೊಕ್ಕೆ ಹೋಬಳಿಯ ಹೊಸಕೆರೆ. ನ್ಯಾಮತಿ ತಾಲ್ಲೂಕಿನ ಬೆಳಗುತ್ತಿ ಹೋಬಳಿಯ ವಡೇಯರ ಹತ್ತೂರು ಗ್ರಾಮದಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮ ಜರುಗಲಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top