Connect with us

Dvgsuddi Kannada | online news portal | Kannada news online

ದಾವಣಗೆರೆ: ಸಹೋದರರ ಕಲಹಕ್ಕೆ 20 ವರ್ಷದ ಅಡಿಕೆ ಮರ ನಾಶ

ಚನ್ನಗಿರಿ

ದಾವಣಗೆರೆ: ಸಹೋದರರ ಕಲಹಕ್ಕೆ 20 ವರ್ಷದ ಅಡಿಕೆ ಮರ ನಾಶ

ದಾವಣಗೆರೆ; ಸಹೋರರ ಕಲಹಕ್ಕೆ 20 ವರ್ಷದ ಬೆಳೆದು ನಿಂತ ಅಡಿಕೆ ತೋಟ ನಾಶವಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ವೀರಾಪುರ ಗ್ರಾಮದಲ್ಲಿ ನಡೆದಿದೆ. ವೆಂಕಟೇಶ್ ಎನ್ನುವ ರೈತನಿಗೆ ಸೇರಿದ 15 ಗುಂಟೆಯಲ್ಲಿದ್ದ 20 ವರ್ಷದ ಅಡಿಕೆ ಮರಗಳನ್ನು ರಾತ್ರೋರಾತ್ರಿ ಜೆಸಿಬಿ ಮೂಲಕ ಕಿತ್ತು ಹಾಕಲಾಗಿದೆ.

ರೈತರಾದ ವೆಂಕಟೇಶಪ್ಪ, ವೀರೇಶಪ್ಪ ಹಾಗೂ ಹನುಮಂತಪ್ಪ ಮೂವರು ಸಹೋದರರು. ಈ ಸಹೋದರರ ಪೈಕಿ ವೆಂಕಟೇಶ್​​ ಅವರ ಪಾಲಿನ ಅಡಿಕೆ ಮರಗಳು ಉತ್ತಮ ಫಸಲು ಬಿಟ್ಟಿದ್ದವು. ಹೀಗಾಗಿ ತೋಟ ಬಿಟ್ಟುಕೊಡುವಂತೆ ಸಹೋದರರಾದ ವೀರೇಶ್ ಹಾಗೂ ಹನುಮಂತಪ್ಪ ಇಬ್ಬರು ವೆಂಕಟೇಶ್​​ಗೆ ಒತ್ತಾಯಿಸಿದ್ದರು. ತೋಟ ಬಿಡಲು ಒಪ್ಪದ ಹಿನ್ನೆಲೆ ಅಡಿಕೆ ಮರಗಳನ್ನು ಕಿತ್ತು ಹಾಕಿದ್ದಾರೆ.

ಘಟನೆ ಸಂಬಂಧ ವೆಂಕಟೇಶ್ ತನ್ನ ಸಹೋದರಿಬ್ಬರ ವಿರುದ್ಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚನ್ನಗಿರಿ ಠಾಣೆಯ ಪೊಲೀಸರು ಆರೋಪಿಗಳಿಗೆ ಹುಡುಕಾಟ ನಡೆಸುತ್ತಿದ್ದಾರೆ. ಸಹೋದರಿಬ್ಬರು ತಲೆ ಮರೆಸಿಕೊಂಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top