Connect with us

Dvgsuddi Kannada | online news portal | Kannada news online

ದಾವಣಗೆರೆ: ನಕಲಿ ಜಾತಿ ಪ್ರಮಾಣ ಪತ್ರ; ರೇಣುಕಾಚಾರ್ಯ ಸಹೋದರನಿಗೆ ಗೇರಾವ್

IMG 20220328 194734

ದಾವಣಗೆರೆ

ದಾವಣಗೆರೆ: ನಕಲಿ ಜಾತಿ ಪ್ರಮಾಣ ಪತ್ರ; ರೇಣುಕಾಚಾರ್ಯ ಸಹೋದರನಿಗೆ ಗೇರಾವ್

ದಾವಣಗೆರೆ: ನಕಲಿ ಜಾತಿ ಪ್ರಮಾಣ ಪತ್ರ ಪ್ರಕರಣ ಹಿನ್ನೆಲೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರ ಎಂ.ಪಿ. ದಾರಕೇಶ್ವರಯ್ಯ ಅವರಿಗೆ ದಲಿತ ಮುಖಂಡರು ದಾವಣಗೆರೆಯಲ್ಲಿ ಗೇರಾವ್ ಹಾಕಿದರು.

ಭಾರೀ ಗದ್ದಲ ಉಂಟಾಗುತ್ತಿದ್ದಂತೆ ಪೊಲೀಸರು ದಾರಕೇಶ್ವರಯ್ಯ ಅವರನ್ನು ರಕ್ಷಿಸಿ ವಾಹನದಲ್ಲಿ ಕರೆದುಕೊಂಡು ಹೋದರು.ಬೇಡ ಜಂಗಮ ಹೆಸರಿನಲ್ಲಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರ ಪಡೆದಿರುವುದನ್ನು ಖಂಡಿಸಿ ದಲಿತ ಮುಖಂಡರು ಮುತ್ತಿಗೆ ಹಾಕಿದರು. ನಾನು ಕಾನೂನು ಬದ್ಧವಾಗಿಯೇ ಬೇಡ ಜಂಗಮ ಪ್ರಮಾಣ ಪತ್ರ ಪಡೆದುಕೊಂಡಿದ್ದೇನೆ ಎಂದು ದ್ವಾರಕೇಶ್ವರಯ್ಯ ಸುದ್ದಿಗೋಷ್ಟಿ ನಡೆಸಿ ಹೊರ ಬರುತ್ತಿದ್ದಂತೆ ಪರಿಶಿಷ್ಟ ಸಮುದಾಯದ ಮುಖಂಡರು ಮುತ್ತಿಗೆ ಹಾಕಿ, ಘೋಷಣೆ ಕೂಗಿದರು.

ಈ ವೇಳೆ ಮಾತಿನ ಚಕಮಕಿ ನಡೆದು ಗಲಾಟೆ ಜೋರಾಯಿತು. ಕೂಡಲೇ ಅಲ್ಲೇ ಇದ್ದ ಪೊಲೀಸರು, ದಾರಕೇಶ್ವರಯ್ಯ ರಕ್ಷಣೆ ಮಾಡಿದರು.ದಲಿತರ ಹಕ್ಕನ್ನು ಕಿತ್ತುಕೊಂಡು ರೇಣುಕಾಚಾರ್ಯ ಹಾಗೂ ದಾರುಕೇಶ್ವರಯ್ಯ ಅವರನ್ನು ಬಂಧಿಸಬೇಕು ಎಂದು ಆಕ್ರೋಶ ವ್ಯಕ್ತಪಡಿದರು.

ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದ್ವಾರಕೇಶ್ವರಯ್ಯ, ನಮ್ಮ ಕುಟುಂಬ ಪಡೆದ ಬೇಡ ಜಂಗಮ ಜಾತಿ ಪ್ರಮಾಣಪತ್ರವನ್ನು ಹೈಕೋರ್ಟ್‌ ಸಿಂಧುಗೊಳಿಸಿದೆ. ವಿಧಾನಸಭೆಯಲ್ಲಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿರುವ ಶಾಸಕ ಪಿ. ರಾಜೀವ್‌, ಗೂಳಿಹಟ್ಟಿ ಶೇಖರ್‌, ಪ್ರಿಯಾಂಕ ಖರ್ಗೆ, ಎನ್‌.ಮಹೇಶ್‌ ಅವರ ಶಾಸತಕತ್ವವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ನನ್ನ ಸಹೋದರನ ಪುತ್ರಿ ಚೇತನಾಗೆ ಬೇಡ ಜಂಗಮ ಪ್ರಮಾಣಪತ್ರವನ್ನು ನಾನು ಕೊಡಿಸಿದ್ದರೂ ಯಾವುದೇ ಸರ್ಕಾರಿ ಸೌಲಭ್ಯವನ್ನು ಪಡೆದುಕೊಂಡಿಲ್ಲ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top