Connect with us

Dvgsuddi Kannada | online news portal | Kannada news online

ಶಾಸಕ ರೇಣುಕಾಚಾರ್ಯ ಸಹೋದರ ಸೇರಿ 11‌ಮಂದಿ ವಿರುದ್ಧ FIR ದಾಖಲು

ದಾವಣಗೆರೆ

ಶಾಸಕ ರೇಣುಕಾಚಾರ್ಯ ಸಹೋದರ ಸೇರಿ 11‌ಮಂದಿ ವಿರುದ್ಧ FIR ದಾಖಲು

ದಾವಣಗೆರೆ: ಬೇಡ ಜಂಗಮ ಮೀಸಲಾತಿ ಪ್ರಮಾಣ ಪತ್ರ ವಿವಾದ ಹಿನ್ನೆಲೆ, ಇದೀಗ ರೇಣುಕಾಚಾರ್ಯ ಸಹೋದರ ಸೇರಿ 11 ಮಂದಿ ವಿರುದ್ಧ ದಲಿತ ಮುಖಂಡರು FIR ದಾಖಲು ಮಾಡಿದ್ದಾರೆ.

ದಾವಣಗೆರೆ ಕೆಟಿಜೆ ನಗರ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದ್ದು,ಪ್ರಕರಣ ಸಂಬಂಧ ದಲಿತ ಸಂಘಟನೆ ಮುಖಂಡ ಹೆಗ್ಗರೆ ರಂಗಪ್ಪ ದೂರು ನೀಡಿದ್ದರು. ದಲಿತ ಮುಖಂಡರು, ದಾರಕೇಶ್ವರಯ್ಯ ಮಧ್ಯೆ ವಾಗ್ವಾದ ನಡೆದಿತ್ತು. ಮಾರ್ಚ್​ 28 ರಂದು ಕೆ.ಬಿ. ಬಡಾವಣೆಯಲ್ಲಿ ಘಟನೆ ನಡೆದಿತ್ತು. ದ್ವಾರಕೇಶ್ವರಯ್ಯನಿಗೆ ದಲಿತ ಮುಖಂಡರು ಗೇರಾವ್ ಹಾಕಿದ್ದರು. ಈ ಮೊದಲು ರೆಣುಕಾಚಾರ್ಯ ಸಹೋದರ ದಾರಕೇಶ್ವರಯ್ಯ 13 ದಲಿತ ಮುಖಂಡರ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದರು. ಇದೀಗ ದಲಿತ ಮುಖಂಡರು ರೇಣುಕಾಚಾರ್ಯ ಸೋದರ ದಾರಕೇಶ್ವರಯ್ಯ ವಿರುದ್ಧ FIR ದಾಖಲಿಸಿದ್ದಾರೆ. ದಾರಕೇಶ್ವರಯ್ಯ ಸೇರಿದಂತೆ 11 ಜನರ ವಿರುದ್ಧ FIR ದಾಖಲು ಮಾಡಲಾಗಿದೆ. 143, 147, 323, 504, 506, 149 ಐಪಿಸಿ ಸೆಕ್ಷನ್ ಅನ್ವಯ ಪ್ರಕರಣ ದಾಖಲಿಸಲಾಗಿದೆ.

ಬೇಡ ಜಂಗಮವೆಂದು ನಕಲಿ ಎಸ್ಸಿ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ಆರೋಪಿಸಿ ದ್ವಾರಕೇಶ್ವರಯ್ಯ ಅವರನ್ನು ದಲಿತ ಮುಖಂಡರು ಈ ಮೊದಲು ಮುತ್ತಿಗೆ ಹಾಕಿದ್ದರು. ಈ ಹಿನ್ನೆಲೆ ದಾರಕೇಶ್ವರಯ್ಯ ಹೋರಾಟಕ್ಕೆ ಮುಂದಾಗಿ ಹೂವಿನಮಡು ಅಂಜನಪ್ಪ, ಹೆಗ್ಗೆರೆ ರಂಗಪ್ಪ ಸೇರಿ 13 ಜನ ದಲಿತ ಮುಖಂಡರ ವಿರುದ್ಧ ದ್ವಾರಕೇಶ್ವರಯ್ಯ ಎಫ್.ಐ.ಆರ್ ದಾಖಲಿಸಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top