Connect with us

Dvgsuddi Kannada | online news portal | Kannada news online

ಹೊನ್ನಾಳಿ ತಾಲ್ಲೂಕು ಸಮಗ್ರ ಅಭಿವೃದ್ಧಿಗೆ 500 ಕೋಟಿ ಪ್ರಸ್ತಾವನೆ: ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

FB IMG 1649333826360

ದಾವಣಗೆರೆ

ಹೊನ್ನಾಳಿ ತಾಲ್ಲೂಕು ಸಮಗ್ರ ಅಭಿವೃದ್ಧಿಗೆ 500 ಕೋಟಿ ಪ್ರಸ್ತಾವನೆ: ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಸಮಗ್ರ ಅಭಿವೃದ್ಧಿಗೆ 500 ಕೋಟಿ ರೂ. ಯೋಜನೆಗಳಿಗೆ ಕೇಂದ್ರ ಭೂ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ‌ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಈ ಸಂಬಂಧ ನವದೆಹಲಿಯಲ್ಲಿ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ, ತಾಲ್ಲೂಕಿನಲ್ಲಿ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಅನುಮೋದನೆ ನೀಡಬೇಕೆಂಬ ಪ್ರಸ್ತಾವನೆ ಸಲ್ಲಿಸಿದರು. ಇದಕ್ಕೆ ಸಕಾರಾತ್ಮಕಾಗಿ ಸ್ಪಂದಿಸಿದ ಗಡ್ಕರಿಯವರು ಕೆಲವು ಯೋಜನೆಗಳಿಗೆ ಶೀಘ್ರದಲ್ಲೇ ಅನುಮತಿ ನೀಡಲಾಗುವುದು. ಉಳಿದ ಯೋಜನೆಗಳನ್ನು ಅಧಿಕಾರಿಗಳಿಂದ ವರದಿ ತರಿಸಿಕೊಂಡು ನಂತರ ಅನುಮೋದನೆ ನೀಡುವ ಆಶ್ವಾಸನೆಯನ್ನು ನೀಡಿದರು.

ಬಹುನಿರೀಕ್ಷಿತ ಹೊನ್ನಾಳಿ ತಾಲ್ಲೂಕಿನ ರಾಂಪುರ ಮತ್ತು ಗೋವಿನಕೋವಿ ನಡುವೆ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಸುಮಾರು 50 ಕೋಟಿ ವೆಚ್ಚದ ಸೇತುವೆ ನಿರ್ಮಾಣಕ್ಕೆ ಸಮ್ಮತಿಸಿದ್ದಾರೆ. ನಲ್ಲೂರಿನಿಂದ ಸವಳಂಗ ಹಾಗೂ ಸಾಸ್ವೆಹಳ್ಳಿ, ರಾಂಪುರ, ಗೋವಿನಕೋವಿ ನಡುವಿನ ರಸ್ತೆ ಸುಧಾರಣೆಗಾಗಿ 62.32 ಕೋಟಿ ಪ್ರಸ್ತಾವನೆಯನ್ನು ರೇಣುಕಾಚಾರ್ಯ ಸಲ್ಲಿಸಿದರು.

ಹರಿಹರ-ಹೊನ್ನಾಳಿ ನಡುವಿನ ಸಂಪರ್ಕ ಕಲ್ಪಿಸುವ ರಸ್ತೆಯ ಅಭಿವೃದ್ಧಿಗೆ 90 ಕೋಟಿ, ಹುಣಸೇಹಳ್ಳಿ, ಬೆನಕನಹಳ್ಳಿ, ಸಾಸ್ವೆಹಳ್ಳಿ, ಲಿಂಗಾಪುರ, ಆನವೇರಿ, ಕೈಮರ, ಹುಣಸೇಹಳ್ಳಿ, ಬಸವಪಟ್ಟಣ, ಸಾಗರಪೇಟೆ, ಒಡೆಯರಹತ್ತೂರು, ಕುಂಕೋವ ನಡುವೆ ರಸ್ತೆ ಸುಧಾರಣೆಗಾಗಿ 62 ಕೋಟಿ ಪ್ರಸ್ತಾವನೆಗೆ ಗಡ್ಕರಿಯವರು ಹಸಿರು ನಿಶಾನೆ ತೋರಿದ್ದಾರೆ.

ಹೊನ್ನಾಳಿ ತಾಲ್ಲೂಕಿನ ದೇವನಾಯಕನಹಳ್ಳಿ, ಮುಸ್ಸೆಹಾಳ, ಸುಂಕದಕಟ್ಟೆ, ಆರಬಗಟ್ಟೆ, ಬಸವನಹಳ್ಳಿ, ಅರೆಹಳ್ಳಿ, ಗಂಗನಕೋಟೆ, ಒಡೇರಹತ್ತೂರು ನಡುವಿನ ರಸ್ತೆಗಳ ಸುಧಾರಣೆಗಾಗಿ 62 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತದೆ.
ಇನ್ನು ಮಾಸಡಿ, ಕುಕ್ಕವಾಡ, ಕೂಲಂಬಿ, ಮುತ್ತೇನಹಳ್ಳಿ ನಡುವಿನ ರಸ್ತೆ ಸುಧಾರಣೆಗಾಗಿ 30 ಕೋಟಿ, ಗೋವಿಂದಕೋವಿಯಿಂದ ಚಿನ್ನಿಕಟ್ಟೆ, ಬಸವನಹಳ್ಳಿ, ದಾನೇಹಳ್ಳಿ, ಆರುಂಡಿ, ರಾಮೇಶ್ವರ, ಕಣವಿಜೋಗ, ಸೂರಗೊಂಡನಕೊಪ್ಪ ಇವುಗಳ ನಡುವಿನ ರಸ್ತೆಗಳ ಅಭಿವೃದ್ಧಿಗೆ 62.14 ಕೋಟಿ ಹಾಗೂ ಗೊಲ್ಲರಹಳ್ಳಿ-ಕೋಣನತಲೆ ನಡುವಿನ ರಸ್ತೆಗಳ ಸುಧಾರಣೆಗೆ 25 ಕೋಟಿ ಸೇರಿದಂತೆ 500 ಕೋಟಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.

ಅಗತ್ಯವಿರುವ ಕಾಮಗಾರಿಗಳನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು. ಉಳಿದಿರುವ ಕಾಮಗಾರಿಗಳಿಗೆ ಹಂತ ಹಂತವಾಗಿ ಒಪ್ಪಿಗೆ ಸೂಚಿಸುವ ಭರವಸೆಯನ್ನು ನಿತಿನ್ ಗಡ್ಕರಿ ನೀಡಿದ್ದಾರೆ ಎಂದು ಎಂ.ಪಿ.ರೇಣುಕಾಚಾರ್ಯ ಅವರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top