ದಾವಣಗೆರೆ: ಆನ್ಲೈನ್ ಮೂಲಕ ಕಲಾವಿದರ ದತ್ತಾಂಶ ಸಂಗ್ರಹ ವ್ಯವಸ್ಥೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಸಚಿವರು ಕಳೆದ ಮಾ. 31 ರಂದು ಲೋಕಾರ್ಪಣೆಗೊಳಿಸಿದ್ದು, ಜಿಲ್ಲೆಯಲ್ಲಿನ ಎಲ್ಲ ಕಲಾವಿದರು, ಸಾಹಿತಿಗಳು ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಸರ್ಕಾರದ ಮಹತ್ವಪೂರ್ಣ ಯೋಜನೆಯಾದ ಕಲಾವಿದರ ದತ್ತಾಂಶ ಸಂಗ್ರಹ ವ್ಯವಸ್ಥೆ ಲೋಕಾರ್ಪಣೆಗೊಂಡಿದ್ದು, ಜಿಲ್ಲಾ ವ್ಯಾಪ್ತಿಯ ಸಾಹಿತಿಗಳು ಹಾಗೂ ಕಲಾವಿದರುಗಳು ಸೇವಾಸಿಂಧು ಪೋರ್ಟಲ್ sevasindhu.karnataka.gov.in ರ ಮೂಲಕ ತಮ್ಮ ಮಾಹಿತಿಯನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 08192-234849 ಕ್ಕೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



