Connect with us

Dvgsuddi Kannada | online news portal | Kannada news online

ದಾವಣಗೆರೆ: ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ವಿದ್ಯುತ್ ಸಂಪರ್ಕ ಕಡಿತ ವಿರೋಧಿಸಿ ಬೆಸ್ಕಾಂ ಕಚೇರಿ ಮುತ್ತಿಗೆ

IMG 20220408 WA0018 696x313 1

ದಾವಣಗೆರೆ

ದಾವಣಗೆರೆ: ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ವಿದ್ಯುತ್ ಸಂಪರ್ಕ ಕಡಿತ ವಿರೋಧಿಸಿ ಬೆಸ್ಕಾಂ ಕಚೇರಿ ಮುತ್ತಿಗೆ

ದಾವಣಗೆರೆ: ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಫಲಾನುಭವಿಗಳ ವಿದ್ಯುತ್ ಸಂಪರ್ಕ ಕಡಿತ ಮತ್ತು ಬಾಕಿ ಮನ್ನಾ ಮಾಡಲು ಆಗ್ರಹಿಸಿ ನಗರದ ಹದಡಿ ರಸ್ತೆಯಲ್ಲಿನ ಬೆಸ್ಕಾಂ ಕಚೇರಿಗೆ ಹದಡಿ ಗ್ರಾಮಸ್ಥರು ಮುತ್ತಿಗೆ ಹಾಕಿ ಪ್ರತಿಭಟಿಸಿದರು.

 

ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ನೇತೃತ್ವದಲ್ಲಿ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಹದಡಿ ಗ್ರಾಮಸ್ಥರು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.ಬೆಸ್ಕಾಂ ಅಧಿಕಾರಿಗಳು ಜಿಲ್ಲೆಯಲ್ಲಿ ಭಾಗ್ಯಜ್ಯೋತಿ, ಕುಟಿರಜ್ಯೋತಿ ವಿದ್ಯುತ್ ಬಳಕೆದಾರರು ವಿದ್ಯುತ್ ಬಿಲ್ ಪಾವತಿಸಿಲ್ಲ ಎಂಬ ಕಾರಣಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಮೂಲಕ 300ಕ್ಕೂ ಅಧಿಕ ಕುಟುಂಬಗಳನ್ನು ಕತ್ತಲಿಗೆ ದೂಡುವುದನ್ನು ತಕ್ಷಣಕ್ಕೆ ನಿಲ್ಲಿಸಬೇಕೆಂದು ಆಗ್ರಹಿಸಿದರು.

ಹದಡಿ ಹಾಲಪ್ಪ ಮಾತನಾಡಿ, ಹದಡಿ ಗ್ರಾಮದಲ್ಲಿ ಸುಮಾರು 300 ಕುಟುಂಬಗಳು ಪಡೆದಿದ್ದ ಭಾಗ್ಯಜ್ಯೋತಿ ಹಾಗೂ ಕುಟಿರ ಜ್ಯೋತಿ ಮನೆ ಬಳಕೆಯ ಸಂಪರ್ಕವನ್ನು ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಕಡಿತಗೊಳಿಸಲಾಗಿದೆ. ಈ ಕುಟುಂಬಗಳು ಕತ್ತಲಲ್ಲಿ ಬದುಕು ಸವೆಸುವಂತಾಗಿದೆ. ಕೂಡಲೇ ಅಧಿಕಾರಿಗಳು ಇದಕ್ಕೆ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದರು.

ರೈತರ ಪ್ರತಿಭಟನೆ ಹೆಚ್ಚಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಬೆಸ್ಕಾಂನ ಎಸ್‍ಇ ಜಗದೀಶ್ ಹಾಗೂ ಕುಕ್ಕವಾಡ ಎಇಇ ಸುಧೀರ್ ಕುಮಾರ್, ಡಿವಿಜನ್ ಎಇಇ ಜಿ.ಎಂ.ನಾಯಕ ಅವರು ಈಗಲೇ ವಿದ್ಯುತ್ ಕಡಿತ ಮಾಡಿರುವ ಮನೆಗಳಿಗೆ ಮರು ಜೋಡಣೆ ಮಾಡುವುದಾಗಿ ಮತ್ತು ಇನ್ನು ಮುಂದೆ ಬಲವಂತದಿಂದ ಯಾವುದೇ ಸಂಪರ್ಕವನ್ನು ಕಡಿತಗೊಳಿಸುವುದಿಲ್ಲ ಎಂದು ಭರವಸೆ ನೀಡಿದ ಮೇರೆಗೆ ಪ್ರತಿಭಟನೆಯನ್ನು ವಾಪಾಸು ಪಡೆಯಲಾಯಿತು.

ಪ್ರತಿಭಟನೆಯಲ್ಲಿ ಗುಮ್ಮನೂರು ಬಸವರಾಜಪ್ಪ, ಹುಚ್ವವ್ವನಹಳ್ಳಿ ಮಂಜುನಾಥ್,ಜೆ.ಸಿ.ನಿಂಗಪ್ಪ, ಆಲೂರು ಪರಶುರಾಮ್, ಜಯಪ್ರಕಾಶ್, ನಿಟುವಳ್ಳಿ ದೇವರಾಜ್, ಪೂಜಾರ್ ಅಂಜಿನಪ್ಪ, ಶಿವಪ್ಳರ ಕೃಷ್ಣಮೂರ್ತಿ, ಹುಚ್ಚವ್ವನಹಳ್ಳಿ ಪ್ರಕಾಶ್, ಕೋಲ್ಕುಂಟೆ ಹುಚ್ಚೆಂಗಪ್ಪ ಸೇರಿದಂತೆ ಹದಡಿ ಗ್ರಾಮಸ್ಥರು ಇದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top