ದಾವಣಗೆರೆ ವಿಶ್ವ ವಿದ್ಯಾಲಯದ ವಾಣಿಜ್ಯ ವಿಭಾಗದ ಪ್ರೊ. ಮುರುಗಯ್ಯ ನಿಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ ಎಂಬಿಎ ವಿಭಾಗದ ಹಿರಿಯ ಅನುಭವಿ, ಕ್ರಿಯಾಶೀಲ ಪ್ರಾಧ್ಯಾಪಕ ಪ್ರೊ. ಮುರುಗಯ್ಯ (62) ಅವರು ಬುಧವಾರ ನಿಧನರಾಗಿದ್ದಾರೆ.

ಕಳೆದ ಒಂದು ವಾರದಿಂದ ಕೊರೊನಾದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯದ ಬೆಳಗಾವಿ ಆವರಣ, ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯಗಳಲ್ಲಿ ಕೆಲಸ ಮಾಡಿದ್ದ ಪ್ರೊ. ಮುರುಗಯ್ಯ ಅವರು, ಪ್ರಸ್ತುತ ದಾವಣಗೆರೆ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಬರುವ ಜೂನ್ 30ರಂದು ಕರ್ತವ್ಯದಿಂದ ನಿವೃತ್ತರಾಗಲಿದ್ದರು.

ಸರಳ, ಸೌಮ್ಯ ಸ್ವಭಾವದ ಪ್ರೊ. ಮುರುಗಯ್ಯ ಅವರು ವ್ಯವಹಾರ ನಿರ್ವಹಣೆಯ ಅಧ್ಯಯನ, ಶಿಕ್ಷಣ, ಸಂಶೋಧನೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಗೌರವಯುತ ಸ್ಥಾನ ಗಳಿಸಿದ್ದರು. ಅವರ ನಿಧನದಿಂದ ವಿಶ್ವವಿದ್ಯಾನಿಲಯಕ್ಕೆ ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ನಷ್ಟವಾಗಿದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಶರಣಪ್ಪ ಹಲಸೆ ಸಂತಾಪ ಸೂಚಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *