Connect with us

Dvgsuddi Kannada | online news portal | Kannada news online

ದಾವಣಗೆರೆ: ದಂಡ ಹಾಕಿದ್ದಕ್ಕೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ ವೃದ್ಧ   

ದಾವಣಗೆರೆ

ದಾವಣಗೆರೆ: ದಂಡ ಹಾಕಿದ್ದಕ್ಕೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ ವೃದ್ಧ   

ದಾವಣಗೆರೆ: ಔಷಧಿ ತರಲು ಹೋಗಿದ್ದ  ವೃದ್ಧನಿಗೆ ಪೊಲೀಸರು  ದಂಡ ಹಾಕಿದ್ದದ್ದಾರೆ. ಇದರಿಂದ ಅಸಮಾಧಾನಗೊಂಡ  ವೃದ್ಧ ನಡು ರಸ್ತೆಯಲ್ಲಿಯೇ ಕುಳಿತು  ಪ್ರತಿಭಟನೆ‌ ನಡೆಸಿದ್ದಾರೆ. ನಗರದ ರೈಲ್ವೆ ನಿಲ್ದಾಣದ ಸಮೀಪದ  ಈ ಘಟನೆ ನಡೆದಿದೆ.

ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಸರ್ಕಾರ ರಾಜ್ಯಾದ್ಯಂತ ಕರ್ಫ್ಯೂ ಜಾರಿ ಮಾಡಿದೆ.  ತುರ್ತು ಸೇವೆಗಳಿಗೆ ಮಾತ್ರ  ಅವಕಾಶ ಕಲ್ಪಿಸಿದೆ. ಓಷಧಿ ಖರೀದಿಗೆ ಯಾವುದೇ ನಿರ್ಬಂಧವಿಲ್ಲ. ಹೀಗಾಗಿ ಪೊಲೀಸರು ದಂಡ ವಿಧಿಸಿದ್ದಕ್ಕೆ ಆಕ್ರೋಶ ಹೊರಹಾಕಿದ್ಧಾರೆ.

ಕಾಯಿಪೇಟೆಯ ಬಸವರಾಜ್ ಎಂಬ ವೃದ್ಧ ಪೊಲೀಸರ ವರ್ತನೆ ಖಂಡಿಸಿ ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದ್ದು, ತನ್ನ ಪುತ್ರನೊಂದಿಗೆ ಔಷಧಿ ತರಲು ಹೋಗಿದ್ದರು.  ಈ ವೇಳೆ ರೈಲ್ವೆ ಸ್ಟೇಷನ್ ಮುಂಭಾಗದಲ್ಲಿ ಪೊಲೀಸರು ಹಿಡಿದು ಬೈಕ್‌ಗೆ 500 ರೂಪಾಯಿ ದಂಡ ಹಾಕಿದ್ದಾರೆ. ಔಷಧಿ ತರಲು ಹೋಗುತ್ತಿದ್ದೇವೆ ಎಂದು ರಶೀದಿ ತೋರಿಸಿದರೂ,  ಪೊಲೀಸರು 500 ರೂಪಾಯಿ ದಂಡ ವಿಧಿಸಿದ್ದಾರೆ  ಎಂದು ಬೇಸರ ವ್ಯಕ್ತಪಡಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top