Connect with us

Dvgsuddi Kannada | online news portal | Kannada news online

ಪಂಚಮಸಾಲಿ ಮೀಸಲಾತಿ; ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ವರದಿ ನಂತರ ಸಿಎಂ ಸೂಕ್ತ ನಿರ್ಧಾರ: ಸಚಿವ ನಿರಾಣಿ

ದಾವಣಗೆರೆ

ಪಂಚಮಸಾಲಿ ಮೀಸಲಾತಿ; ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ವರದಿ ನಂತರ ಸಿಎಂ ಸೂಕ್ತ ನಿರ್ಧಾರ: ಸಚಿವ ನಿರಾಣಿ

ದಾವಣಗೆರೆ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಚಾರವಾಗಿ ಈಗಾಗಲೇ ಸಮೀಕ್ಷೆ ಆರಂಭವಾಗಿದೆ‌. ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಈ ವರದಿ ನಂತರ ಸಿಎಂ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು.

ಹರಿಹರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ವಿಚಾರದಲ್ಲಿ ಒಬ್ಬೊಬ್ಬ ನಾಯಕರು ಒಂದೊಂದು ರೀತಿಯಲ್ಲಿ ಹೋರಾಟದಲ್ಲಿ ತೊಡಗಿದ್ದಾರೆ. ಕೆಲವರು ಕೋ-ಕೋ, ಕಬಡ್ಡಿ ಆಡುತ್ತಿದ್ದಾರೆ. ಇನ್ನು ಕೆಲವರು ಚೆಸ್ ಆಡುತ್ತಿದ್ದಾರೆ. ಮೀಸಲಾತಿಗಾಗಿ ನಾನು ಬೀದಿಗಿಳಿದು ಹೋರಾಟ ಮಾಡಲು ಸಾಧ್ಯವಿಲ್ಲ. ಸರ್ಕಾರದ ಒಂದು ಅಂಗವಾಗಿ ಹಾಗೂ ಸಚಿವನಾಗಿ ಕೆಲಸ ಮಾಡ್ತಿದ್ದೇನೆ ಎಂದರು.

ಪಿಎಸ್​ಐ ನೇಮಕಾತಿ ​ ವಿಚಾರದಲ್ಲಿ ಸರ್ಕಾರ ಸ್ಪಷ್ಟವಾಗಿದ್ದು, ಮುಕ್ತವಾಗಿ ತನಿಖೆ ನಡೆಯುತ್ತಿದೆ. ಇದರಲ್ಲಿ ಯಾವುದೇ ಪಕ್ಷ, ಯಾವುದೇ ಜಾತಿ ವ್ಯಕ್ತಿಗಳಿದ್ದರೂ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top