Connect with us

Dvgsuddi Kannada | online news portal | Kannada news online

ದಾವಣಗೆರೆ: ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ತರಕಾರಿ ಬೀಜಗಳ ಕಿಟ್ ವಿತರಣೆ

ದಾವಣಗೆರೆ

ದಾವಣಗೆರೆ: ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ತರಕಾರಿ ಬೀಜಗಳ ಕಿಟ್ ವಿತರಣೆ

ದಾವಣಗೆರೆ: 2021-22 ನೇ ಸಾಲನ ತೋಟಗಾರಿಕೆ ಇಲಾಖೆಯಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ತರಕಾರಿ ಬೀಜಗಳ ಕಿಟ್ ವಿತರಣೆ ಕಾರ್ಯಕ್ರಮದಡಿ ಅನುಷ್ಠಾನಕ್ಕಾಗಿ ಅರ್ಹ ಆಸಕ್ತ ದಾವಣಗೆರೆ ತಾಲ್ಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರುಗಳಗೆ ತರಕಾರಿ ಬೀಜಗಳು ಲಭ್ಯವಿದ್ದು, ತರಕಾರಿ ಬೀಜಗಳ ಕಿಟ್ ವಿತರಣೆ ಕಾರ್ಯಕ್ರಮದಡಿ ಬೆಂಗಳೂರು ಲಾಲ್‍ಬಾಗ್ ತೋಟಗಾರಿಕೆ ನಿರ್ದೇಶನಾಲಯ ವತಿಯಿಂದ ನೀಡಲಾಗಿರುವ ಮಾರ್ಗಸೂಚಿಯನ್ವಯ ಆಸಕ್ತ ರೈತರು ಅರ್ಜಿಗಳನ್ನು ಕಚೇರಿಯ ಸಮಯದಲ್ಲಿ ತಾಲ್ಲೂಕಿನ ಸಹಾಯಕ ತೋಟಗಾರಿಕೆ ಅಧಿಕಾರಿರವರಿಗೆ ಸಲ್ಲಸಿ ತರಕಾರಿ ಬೀಜದ ಕಿಟ್‍ಗಳನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ: ಸಂಬಂಧಪಟ್ಟ ಹೋಬಳಿಯ ರೈತ ಸಂಪರ್ಕ ಕೇಂದ್ರಗಳ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.) ದಾವಣಗೆರೆ, ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಆನಗೋಡು ಮೊ.ಸಂ: 7019819101, ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಮಾಯಕೊಂಡ-1 ಮೊ.ಸಂ: 7899445111, ಮೊಯಕೊಂಡ-02 ಮೊ.ಸಂ: 9902866619, 8722551293, ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಕಸಬಾ ಮೊ.ಸಂ: 7022244152 ನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top