Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು; ನಾಳೆ ಬಸವ ಜಯಂತಿ, ವಚನ ವೈಭವ ಕಾರ್ಯಕ್ರಮ

ದಾವಣಗೆರೆ

ದಾವಣಗೆರೆ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು; ನಾಳೆ ಬಸವ ಜಯಂತಿ, ವಚನ ವೈಭವ ಕಾರ್ಯಕ್ರಮ

ದಾವಣಗೆರೆ: ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು, ವಿನೂತನ ಮಹಿಳಾ ಸಮಾಜ ದಾವಣಗೆರೆ ಹಾಗೂ ದಾವಣಗೆರೆ ಜಿಲ್ಲಾ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು  ಸಂಯುಕ್ತಾಶ್ರಯದಲ್ಲಿ ನಾಳೆ (ಮೇ 3)  ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ಕನ್ನಡ ಭವನದಲ್ಲಿ ಬಸವ ಜಯಂತಿ ಮತ್ತು ವಚನ ವೈಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಯರಗುಂಟೆಯ ಶ್ರೀ ಗುರು ಕರಿಬಸವೇಶ್ವರಸ್ವಾಮೀಜಿ,  ಗದ್ದಿಗೆಮಠದ ಶ್ರೀ ಪರಮೇಶ್ವರ ಮಹಾಸ್ವಾಮೀಜಿ ವಹಿಸುವರು.  ಅಧ್ಯಕ್ಷತೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ವಾಮದೇವಪ್ಪ ವಹಿಸಿಕೊಳ್ಳಲಿದ್ದು, ಬಸವ ತತ್ವ ಪ್ರಚಾರಕ ಜಿ.ಬಿ.ಚಂದ್ರಶೇಖರಪ್ಪ ಬಸವೇಶ್ವರ ಚಿಂತನೆಗಳು ವಿಷಯದ ಬಗ್ಗೆ ಉಪನ್ಯಾಸ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಘದ ರಾಜ್ಯಾಧ್ಯಕ್ಷ ಎನ್.ಈ.ನಟರಾಜ್, ಸಂಘದ  ಜಿಲ್ಲಾಧ್ಯಕ್ಷ ಕೆ.ಶಿವಶಂಕರ್, ವಿನೂತನ ಮಹಿಳಾ ಸಮಾಜದ ಅಧ್ಯಕ್ಷೆ ಪ್ರಸನ್ನ ಚಂದ್ರಪ್ರಭು, ಹಾಗೂ ದಾವಣಗೆರೆ ತಾಲ್ಲೂಕು ಕಸಾಪ ಅಧ್ಯಕ್ಷೆ ಸುಮತಿ ಜಯಪ್ಪ ಭಾಗವಹಿಸಲಿದ್ದಾರೆ.  ವಿನೂತನ ಮಹಿಳಾ ಸಮಾಜ ಮತ್ತು ಭರತಾಂಜಲಿ ಅಕಾಡೆಮಿ ಫಾರ್ ಫರಫಾರ್ಮಿಂಗ್ ಆರ್ಟ್ಸ್ ವತಿಯಿಂದ ವಚನ ಗಾಯನ ಹಾಗೂ ವಚನ ನೃತ್ಯ ವೈಭವ ನಡೆಯಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top