Connect with us

Dvgsuddi Kannada | online news portal | Kannada news online

ದಾವಣಗೆರೆ: ಜಪ್ತಿ ಮಾಡಿದ 150 ಕ್ಚಿಂಟಲ್ ಪಡಿತರ ಅಕ್ಕಿ ಮೇ.19 ರಂದು ಬಹಿರಂಗ ಹರಾಜು

ದಾವಣಗೆರೆ

ದಾವಣಗೆರೆ: ಜಪ್ತಿ ಮಾಡಿದ 150 ಕ್ಚಿಂಟಲ್ ಪಡಿತರ ಅಕ್ಕಿ ಮೇ.19 ರಂದು ಬಹಿರಂಗ ಹರಾಜು

ದಾವಣಗೆರೆ: ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಚಿತ್ರದುರ್ಗದ ಕಡೆಗೆ ಎನ್.ಹೆಚ್-4 ರಸ್ತೆಯ ಮೂಲಕ ಅಶೋಕ್ ಲೈಲ್ಯಾಂಡ್ ಲಾರಿಯಲ್ಲಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 150.05 ಕ್ವಿಂ ಅಕ್ಕಿಯನ್ನು ಜಪ್ತಿ ಮಾಡಿಕೊಳ್ಳಲಾಗಿದ್ದು, ಧಾನ್ಯವನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ, ಮೇ.19 ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆಯ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆ-2 ಎ.ಪಿ.ಎಂ.ಸಿ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುವುದು, ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.

ಹರಾಜಿನಲ್ಲಿ ಭಾಗವಹಿಸುವ ಬಿಡ್‍ದಾರರು ಎಪಿಎಂಸಿ ಟ್ರೇಡ್ ಲೈಸೆನ್ಸ್‍ನೊಂದಿಗೆ ಹಾಜರಾಗಬೇಕು. ಹರಾಜು ದಿನ ಒಂದು ಗಂಟೆ ಮುಂಚೆ ಶೇ.10ರಷ್ಟು ಮೊಬಲಗನ್ನು ಮುಂಗಡ ಠೇವಣಿಯಾಗಿ ಇಡಬೇಕು. ತಪ್ಪಿದಲ್ಲಿ ಅಂತಹವರಿಗೆ ಹರಾಜಿನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಎಂದು ಆಹಾರ, ನಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top