Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ 16 ವರ್ಷದೊಳಗಿನ ಮಕ್ಕಳಿಗೆ ಚೆಸ್ ಸ್ಪರ್ಧೆ

chess

ದಾವಣಗೆರೆ

ದಾವಣಗೆರೆ: ನಾಳೆ 16 ವರ್ಷದೊಳಗಿನ ಮಕ್ಕಳಿಗೆ ಚೆಸ್ ಸ್ಪರ್ಧೆ

ದಾವಣಗೆರೆ: ಜಿಲ್ಲಾ ಚೆಸ್ ಅಸೋಸಿಯೇಶನ್ ವತಿಯಿಂದ ನಗರದ ನಿಜಲಿಂಗಪ್ಪ ಬಡಾವಣೆಯ ಜಿಲ್ಲಾ ಕಾಂಗ್ರೆಸ್ ಸಮುದಾಯ ಭವನದಲ್ಲಿ ಮೇ.15ರಂದು 16 ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ ತಿಳಿಸಿದ್ದಾರೆ.

ಈ ಸ್ಪರ್ಧೆಯು ಸ್ವಿಸ್ ಲೀಗ್ ಮಾದರಿಯಲ್ಲಿ ನಡೆಯಲಿದ್ದು ಲೀಗ್‌ನಲ್ಲಿ 7 ಸುತ್ತುಗಳು ನಡೆಯಲಿವೆ ಭಾಗವಹಿಸಿದ ಎಲ್ಲಾ ಸ್ಪರ್ಧಾಳುಗಳು 7 ಸುತ್ತುಗಳಲ್ಲಿ ಆಡಲಿದ್ದಾರೆ. ಸಂಜೆ ಬಹುಮಾನ ವಿತರಣೆ ಸಮಾರಂಭ‌ ನಡೆಯಲಿದೆ. ಸಂಘದ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ, ಮಹಾನಗರ ಪಾಲಿಕೆ ಮಾಜಿ ವಿಪಕ್ಷ ನಾಯಕ ಎ ನಾಗರಾಜ್ ಬಹುಮಾನ ವಿತರಣೆ ಮಾಡಲಿದ್ದಾರೆ.

ಈ ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ ಹತ್ತು ಸ್ಥಾನಗಳಿಗೆ ಟ್ರೋಫಿ ಮತ್ತು ನಗದು ಬಹುಮಾನವನ್ನು ಹಾಗೂ 8ವರ್ಷದ ಮಕ್ಕಳಿಗೆ 10 ವರ್ಷದ ಮಕ್ಕಳಿಗೆ 12 ವರ್ಷದ ಮಕ್ಕಳಿಗೆ ತಲಾ 5 ವಿಶೇಷ ಬಹುಮಾನವನ್ನು ಪಂದ್ಯಾವಳಿಯಲ್ಲಿ ಭಾಗವಹಿಸುವ ಎಲ್ಲ ಸ್ಪರ್ಧಾಳುಗಳಿಗೆ ಪ್ರಶಸ್ತಿ ಪತ್ರ ವನ್ನು ವಿತರಿಸಲಾಗುವುದು. ಸ್ಪರ್ಧೆಗೆ ಭಾಗವಹಿಸುವರು ದಿನಾಂಕ ಹದಿನೈದು ರ ಭಾನುವಾರ ಬೆಳಗ್ಗೆ ಹತ್ತು ಗಂಟೆಯ ಒಳಗೆ ಹೆಸರನ್ನು ನೋಂದಾಯಿಸಲು ಹಾಗೂ ಹೆಚ್ಚಿನ ಮಾಹಿತಿಗೆ 9945613469, 7259310197 ಸಂಪರ್ಕಿಸಿ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top