Connect with us

Dvgsuddi Kannada | online news portal | Kannada news online

ದಾವಣಗೆರೆ: ಈ ತಿಂಗಳಿಂದ ಪೋಷಕಾಂಶಭರಿತ ಅಕ್ಕಿ ವಿತರಣೆ; ಕಾಳಸಂತೆಯಲ್ಲಿ ಮಾರಾಟ ಮಾಡಿದ್ರೆ ಬಿಪಿಎಲ್ ಕಾರ್ಡ್ ರದ್ದು; ಡಿಸಿ

ration raice

ದಾವಣಗೆರೆ

ದಾವಣಗೆರೆ: ಈ ತಿಂಗಳಿಂದ ಪೋಷಕಾಂಶಭರಿತ ಅಕ್ಕಿ ವಿತರಣೆ; ಕಾಳಸಂತೆಯಲ್ಲಿ ಮಾರಾಟ ಮಾಡಿದ್ರೆ ಬಿಪಿಎಲ್ ಕಾರ್ಡ್ ರದ್ದು; ಡಿಸಿ

ದಾವಣಗೆರೆ: ಸಾರ್ವಜನಿಕ ವಿತರಣಾ ಪದ್ಧತಿಯಡಿ ನೀಡುವ ಅಕ್ಕಿಯನ್ನು ಸ್ವಂತಕ್ಕೆ ಉಪಯೋಗಿಸತಕ್ಕದ್ದು, ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹ ಕುಟುಂಬಕ್ಕೆ ನೀಡಿದ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಪಡಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನನಿತ್ಯದ ಆಹಾರದಲ್ಲಿ ಸಂಪೂರ್ಣ ಷೋಷಕಾಂಶಗಳು ಲಭ್ಯವಾಗದೇ ಇರುವ ಕಾರಣದಿಂದಾಗಿ, ಅನೀಮಿಯಾ, ಇರುಳು ಕುರುಡುತನದಂತಹ ರೋಗಗಳು ಬರಬಹುದಾಗಿದೆ. ಅಲ್ಲದೇ ಹೆಚ್ಚಾಗಿ ಮಹಿಳೆಯರು ಹಾಗೂ ಮಕ್ಕಳು ಅಪೌಷ್ಟಿಕತೆಗೆ ಬಲಿಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು,. ಇದನ್ನು ತಪ್ಪಿಸಲು ಹೆಚ್ಚಿನ ಪೋಷಕಾಂಶದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಜನಸಾಮಾನ್ಯರಲ್ಲಿನ ಅಪೌಷ್ಠಿಕತೆ ಹೋಗಲಾಡಿಸಿ ಆರೋಗ್ಯ ವೃದ್ಧಿಸುವ ಉದ್ದೇಶದಿಂದ ಸಾರ್ವಜನಿಕ ವಿತರಣಾ ಪದ್ಧತಿಯ ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡಲಾಗುವ ಪ್ರತಿ 50 ಕೆ.ಜಿ ಅಕ್ಕಿಯ ಚೀಲದಲ್ಲಿ ಅರ್ಧ ಕೆ.ಜಿ.ಯಷ್ಟು ಪೋಷಕಾಂಶ (ವಿಟಾಮಿನ್ ‘ಎ’ ಮತ್ತು ‘ಡಿ’ ಐರನ್, ಪೋಲಿಕ್ ಆಸಿಡ್, ಬಿಕಾಂಪ್ಲೆಕ್ಸ್, ಜಿಂಕ್ ಹಾಗೂ ಐಯೋಡಿನ್) ಭರಿತ ಸಾರವರ್ದಿತ ಅಕ್ಕಿಯಲ್ಲಿ ಬೇರೆಸಿ ಮೇ-2022ರ ಮಾಹೆಯಿಂದ ನ್ಯಾಯಬೆಲೆ ಅಂಗಡಿಯಲ್ಲಿ ವಿತರಣೆ ಮಾಡಲಾಗುತ್ತಿದೆ.

ಸಾರವರ್ದಿತಗೊಳಿಸಿರುವ (ಪೋರ್ಟಿಫೈಡ್) ಅಕ್ಕಿಯಲ್ಲಿ ಕೆಲವೊಂದು ಅಕ್ಕಿಯ ಕಾಳುಗಳು ಹೊಳಪಿನಿಂದ ನೀಡಲು ಪ್ಲಾಸ್ಟಿಕ್ ರೀತಿಯಲ್ಲಿ ಕಾಣಿಸುತ್ತಿದ್ದು, ಸಾರ್ವಜನಿಕರು ಆತಂಕಕ್ಕೆ ಒಳಗಾಗದೇ ವಿತರಣೆ ಮಾಡಲಾಗುತ್ತಿರುವ ಸಾರವರ್ಧಿತ ಅಕ್ಕಿಯನ್ನು ಉಪಯೋಗಿಸಿ ಆರೋಗ್ಯವಂತರಾಗಲು ಸೂಚಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top