ದಾವಣಗೆರೆ: ರೈತಮುಖಂಡ ತೇಜಸ್ವಿ ಪಟೇಲ್ ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಎಸ್. ಎಸ್ . ಮಲ್ಲಿಕಾರ್ಜುನ ಅವರನ್ನು ಭೇಟಿ ಚರ್ಚೆ ನಡೆಸಿದ್ದಾರೆ.
ನನ್ನ ಹಿತೈಷಿಗಳು ಕಾಂಗ್ರೆಸ್ ಪಕ್ಷ ಸೇರುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಎಸ್. ಎಸ್. ಮಲ್ಲಿಕಾರ್ಜುನ ಅವರೊಂದಿಗೆ ಮಾತನಾಡಿದ್ದೇನೆ. ಅವರು ಸಹ ಪಕ್ಷ ಸೇರ್ಪಡೆಗೆ ಸಮ್ಮತಿಸಿದ್ದಾರೆ. ನನ್ನ ಸಹೋದರ ಮಹಿಮ ಪಟೇಲ್ ಹಾಗೂ ಮಾಜಿ ಶಾಸಕ ವಡ್ನಾಳ್ ರಾಜಣ್ಣ ಜತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತೇಜಸ್ವಿ ಪಟೇಲ್ ತಿಳಿಸಿದ್ದಾರೆ.



