ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಪ್ರಧಾನ ಮಂತ್ರಿಗಳು ಭಾಗವಹಿಸಿದ “ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್” ಯೋಜನೆಯ ಮಕ್ಕಳ ಕಾರ್ಯಕ್ರಮವನ್ನು ವಿಡಿಯೋ ಕಾನ್ಫರೆನ್ಸ್ ಸಭೆಯ ಮೂಲಕ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಕೊರೋನಾ ಸಾಂಕ್ರಾಮಿಕ ರೋಗದಿಂದ ಪೋಷಕರನ್ನು ಕಳೆದುಕೊಂಡಂತಹ ಮಕ್ಕಳನ್ನು ಉದ್ದೇಶಿಸಿ ವಚ್ರ್ಯುವಲ್ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಇದೇ ವೇಳೆ ಕೋವಿಡ್-19 ಸಾಂಕ್ರಾಮಿಕ ರೋಗದಿಂದ ತಂದೆ-ತಾಯಿಗಳನ್ನು ಕಳೆದುಕೊಂಡು ಪಿ.ಎಂ.ಕೇರ್ಸ್ ಪೋರ್ಟಲ್ನಲ್ಲಿ ಅನುಮೋದನೆಗೊಂಡಿರುವ ಜಿಲ್ಲೆಯ 04 ಜನ ಮಕ್ಕಳಿಗೆ ಪಿ.ಎಂ ಕೇರ್ಸ್ ಪೋಸ್ಟ್ ಆಫೀಸ್ ಪಾಸ್ ಬುಕ್, 10 ಲಕ್ಷ ರೂ.ಬಾಂಡ್, ಆಯುಷ್ಮನ್ ಹೆಲ್ತ್ ಕಾರ್ಡ್, ಉಚಿತ ಶಿಕ್ಷಣ, ಉನ್ನತ ವಿದ್ಯಾಭ್ಯಾಸಕ್ಕೆ ಸಾಲ ಸೌಲಭ್ಯ, ಸ್ನೇಹ ಮತ್ತು ಪ್ರಶಂಶೆ ಪ್ರಮಾಣ ಪತ್ರ ಹಾಗೂ ವಿವಿಧ ಸೌಲಭ್ಯಗಳನ್ನು ಒಳಗೊಂಡ ಕಿಟ್ ಹಸ್ತಾಂತರಿಸಲಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ್, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಚನ್ನಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಪ್ಪೇಶಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗರಾಜ್, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಕೌಸರ್ ರೇಷ್ಮಾ , ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪೂರ್ಣಿಮಾ.ಎಂ ಸೇರಿದಂತೆ ಇತರರು ಹಾಜರಿದ್ದರು.



