Connect with us

Dvgsuddi Kannada | online news portal | Kannada news online

ನಾಳೆ ಬೆಂಗಳೂರಲ್ಲಿ ನಡೆಯಲಿರುವ ರೈತ ವಿದ್ಯಾ ನಿಧಿ ಕಾರ್ಯಕ್ರಮಕ್ಕೆ  ಜಿಲ್ಲೆಯ ಪ್ರತಿನಿಧಿಯಾಗಿ ಐವರು ಮಕ್ಕಳು ಭಾಗಿ

farmer children

ಪ್ರಮುಖ ಸುದ್ದಿ

ನಾಳೆ ಬೆಂಗಳೂರಲ್ಲಿ ನಡೆಯಲಿರುವ ರೈತ ವಿದ್ಯಾ ನಿಧಿ ಕಾರ್ಯಕ್ರಮಕ್ಕೆ  ಜಿಲ್ಲೆಯ ಪ್ರತಿನಿಧಿಯಾಗಿ ಐವರು ಮಕ್ಕಳು ಭಾಗಿ

ದಾವಣಗೆರೆ:  ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ  ನಾಳೆ (ಸೆ.5)  ಹಮ್ಮಿಕೊಂಡಿರುವ ರೈತ ವಿದ್ಯಾನಿಧಿ ಕಾರ್ಯಕ್ರಮ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರತಿನಿಧಿಗಳಾಗಿ ದಾವಣಗೆರೆ ಜಿಲ್ಲೆಯಿಂದ ಐವರು ರೈತರ ಮಕ್ಕಳು (ವಿದ್ಯಾರ್ಥಿಗಳು) ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ವಿದ್ಯಾರ್ಥಿಗಳಿಗೆ ಇಂದು ಜಂಟಿ ಕೃಷಿ ನಿರ್ದೇಶಕರು, ಉಪ ಕೃಷಿ ನಿರ್ದೇಶಕರು, ಇಲಾಖೆಯ ಅಧಿಕಾರಿಗಳು, ಪೋಷಕರು ಶುಭ ಹಾರೈಸಿದರು. ರೈತ ವಿದ್ಯಾನಿಧಿ ಯೋಜನೆಯಡಿ ಪದವಿಯ ಮುಂಚೆ ಪಿಯುಸಿ, ಐ.ಟಿ.ಐ, ಡಿಪ್ಲೊಮಾ ಮಾಡಿರುವ ಹುಡುಗರಿಗೆ ರೂ.2500 ಹುಡುಗಿಯರು ಅಥವಾ ತೃತೀಯ ಲಿಂಗದವರಿಗೆ ರೂ.3000, ಎಲ್ಲಾ ಬಿ.ಎ, ಬಿಎಸ್ಸಿ, ಬಿ.ಕಾಂ, ಎಂ.ಬಿ.ಬಿ.ಎಸ್., ಬಿ.ಇ, ಬಿ.ಟೆಕ್ ಮತ್ತು ವೃತ್ತಿಪರ ಕೋರ್ಸ್‍ಗಳನ್ನು ಹೊರತುಪಡಿಸಿ ಪುರುಷರಿಗೆ ರೂ.5000, ಮಹಿಳೆಯರಿಗೆ ಹಾಗೂ ತೃತೀಯ ಲಿಂಗದವರಿಗೆ ರೂ.5500, ಎಲ್.ಎಲ್.ಬಿ, ಪ್ಯಾರಾ ಮೆಡಿಕಲ್, ಬಿ.ಫಾರ್ಮ, ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್‍ಗಳಲ್ಲಿ ಅಭ್ಯಾಸ ಮಾಡುವ ಪುರುಷರಿಗೆ ರೂ.7500, ಮಹಿಳೆಯರಿಗೆ ರೂ.8000, ಎಂ.ಬಿ.ಬಿ.ಎಸ್, ಬಿ.ಇ, ಬಿ.ಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್‍ಗಳಲ್ಲಿ ಅಭ್ಯಾಸ ಮಾಡುವ ಪುರುಷರಿಗೆ ರೂ.10000, ಮಹಿಳೆಯರಿಗೆ ಹಾಗೂ ತೃತೀಯ ಲಿಂಗದವರಿಗೆ ರೂ.11000 ಶಿಷ್ಯ ವೇತನ ನೀಡಲು ಯೋಜನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top