Connect with us

Dvgsuddi Kannada | online news portal | Kannada news online

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರತಿಷ್ಠಿತ ಶಾಲೆಯಲ್ಲಿ 6ನೇ ತರಗತಿ ಪ್ರವೇಶ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

Davanagere DC office

ದಾವಣಗೆರೆ

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರತಿಷ್ಠಿತ ಶಾಲೆಯಲ್ಲಿ 6ನೇ ತರಗತಿ ಪ್ರವೇಶ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿಗೆ ಪ್ರತಿಭಾನ್ವಿತ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು 5ನೇ ತರಗತಿಯಲ್ಲಿ ಶೆ.60ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ ರೂ.2 ಲಕ್ಷದೊಳಗಿರಬೇಕು. ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಅಂಕಪಟ್ಟಿ ಹಾಗೂ ಆದಾಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಆಯಾ ತಾಲ್ಲೂಕಿನಲ್ಲಿಯೇ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ದಾವಣಗೆರೆ ಹಾಗೂ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top