ದಾವಣಗೆರೆ: ಬಸವಣ್ಣನವರು ಸಮಾಜಕ್ಕೆ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಬಸವಣ್ಣನವರ ತತ್ವಗಳು ಪ್ರತಿಯೊಬ್ಬ ವ್ಯಕ್ತಿಗೂ ಅಗತ್ಯವಾಗಿವೆ. ಅವರ ವಚನಗಳೇ ನಮಗೆ ಆಧಾರ ಆಗಿದ್ದು , ಅದನ್ನು ತಿರುಚುವ ಪ್ರಯತ್ನ ಆಗಬಾರದು. ವಾಸ್ತವ ವಿಚಾರಗಳನ್ನ ಪ್ರಕಟ ಮಾಡುವುದು ಒಳ್ಳೆಯದು. ಬಸವಣ್ಣ ಮಾನವ ಬದುಕಿಗೆ ಬೇಕಾದ ತತ್ಚವನ್ನು ಕೊಟ್ಟಿದ್ದಾರೆ. ನಮ್ಮನ ನಾವು ತಿದ್ದಿಕೊಳ್ಳುವ ಪ್ರಯತ್ನ ಮಾಡಿದರೆ ಅದು ಬಸವಣ್ಣನವರಿಗೆ ಕೊಡುವ ಗೌರವವಾಗಿದೆ ಎಂದು ತುಮಕೂರು ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕದ ವಿಷಯ ಈಗಾಗಲೇ ಬಹಳಷ್ಟು ತಿರುವು ಪಡೆದುಕೊಳ್ಳುತ್ತಿದೆ. ಯಾವುದೇ ಕಾರಣದಿಂದ ಇಂತಹ ವಾತಾವರಣ ಸೃಷ್ಟಿ ಆಗಬಾರದು. ಮಕ್ಕಳಿಗೆ ನೈತಿಕ ಶಿಕ್ಷಣ ಅತ್ಯಂತ ಅಗತ್ಯವಾಗಬೇಕಾಗಿದೆ. ಮೂಲ ವಿಚಾರವನ್ನು ತಿದ್ದದೆ ವಾಸ್ತವವಾಗಿ ಕೊಡಬೇಕು. ವಾದ ವಿವಾದಗಳು ಪೂರ್ಣಗೊಂಡು ಶಾಂತಿ ವಾತವರಣ ನಿರ್ಮಾಣ ಆಗಬೇಕು. ಮಕ್ಕಳ ಕಲಿಕೆಗೆ ಪೂರಕ ವಾತಾವರಣ ಉಂಟಾಗಬೇಕು ಎಂದರು.



