Connect with us

Dvgsuddi Kannada | online news portal | Kannada news online

ಭತ್ತ ಕಟಾವಿನ ಚೈನ್ ಯಂತ್ರಕ್ಕೆ 2,250 ದರ ನಿಗದಿ; ಹೆಚ್ಚುವರಿ ದರ ಪಡೆದ್ರೆ ಕಾನೂನು ಕ್ರಮ: ಡಿಸಿ

img overview

ದಾವಣಗೆರೆ

ಭತ್ತ ಕಟಾವಿನ ಚೈನ್ ಯಂತ್ರಕ್ಕೆ 2,250 ದರ ನಿಗದಿ; ಹೆಚ್ಚುವರಿ ದರ ಪಡೆದ್ರೆ ಕಾನೂನು ಕ್ರಮ: ಡಿಸಿ

ದಾವಣಗೆರೆ: ಬೆಲ್ಟ್/ಚೈನ್ ಟೈಪ್ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ರೂ.2250/- ಹಾಗೂ ಟೈರ್ ಟೈಪ್ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ರೂ.1800/- ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಿದೆ. ಹೆಚ್ಚುವರಿ ದರ ಪಡೆದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಮಹಾಂತೇಶ್ ಬೀಳಗಿ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಬೇಸಿಗೆ ಹಂಗಾಮಿನಲ್ಲಿ 54,695 ಹೆಕ್ಟರ್ ಪ್ರದೇಶದಲ್ಲಿ ಭತ್ತದ ಬೆಳೆಯ ಕ್ಷೇತ್ರ ಆವರಿಸಿದ್ದು, ಸದ್ಯ ಭತ್ತದ ಬೆಳೆಯು ಕಟಾವಿನ ಹಂತ ತಲುಪಿರುತ್ತದೆ. ಹಾಗೂ ಜಿಲ್ಲೆಯಲ್ಲಿ ಭತ್ತದ ಕಟಾವು ಪ್ರಾರಂಭವಾಗಿದೆ. ಜಿಲ್ಲೆಯ ಬಹುತೇಕ ರೈತರು ಭತ್ತದ ಬೆಳೆಯನ್ನು ಕಟಾವು ಯಂತ್ರಗಳ ಮೂಲಕ ಕಟಾವು ಮಾಡುತ್ತದ್ದು, ರೈತರು ತಮ್ಮ ಸಮೀಪದ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯವಿರುವ ಭತ್ತ ಕಟಾವು ಯಂತ್ರಗಳ ಪ್ರಯೋಜನವನ್ನು ಪಡೆಯಬಹುದು.

ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಅತಿಹೆಚ್ಚು ಬಾಡಿಗೆ ಹಣ ನಿಗದಿಪಡಿಸುತ್ತಿರುವುದು ಗಮನಕ್ಕೆ ಬಂದಿದ್ದು ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಆದ್ದರಿಂದ ಭತ್ತ ಕಟಾವು ಯಂತ್ರದ ಬಾಡಿಗೆ ದರವನ್ನು ಪರಿಷ್ಕರಿಸಲಾಗಿರುತ್ತದೆ. ಅತಿವೃಷ್ಠಿ ಸಂಕಷ್ಟದ ಸಂದರ್ಭದಲ್ಲಿ ಬೆಲ್ಟ್/ಚೈನ್ ಟೈಪ್ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ರೂ.2250/- ಹಾಗೂ ಟೈರ್ ಟೈಪ್ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ರೂ.1800/- ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಿದೆ. ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಹೆಚ್ಚಿನ ದರ ಪಡೆದರೆ ಭತ್ತ ಕಟಾವು ಯಂತ್ರದ ಮಾಲೀಕರ ವಿರುದ್ದ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಅತಿವೃಷ್ಠಿ ಸಂಕಷ್ಟದ ದಿನಗಳಲ್ಲಿ ಸಹಕರಿಸಬೇಕು. ಭತ್ತ ಕಟಾವು ಯಂತ್ರದ ಮಾಲೀಕರು ಹೆಚ್ಚಿನ ದರ ನಿಗದಿಪಡಿಸಿದ್ದಲ್ಲಿ ರೈತರು ಕಂದಾಯ/ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರಾದ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top